ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅತ್ಯಂತ ನಂಬಿಕಸ್ಥ ಬ್ಯಾಟ್ಸ್ಮನ್ ಆಗಿ ಗುರುತಿಸಿಕೊಂಡಿದ್ದ ಸುರೇಶ್ ರೈನಾ ವೈಯುಕ್ತಿಕ ಕಾರಣ ನೀಡಿ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿದ್ದರು.
ಸುರೇಶ್ ರೈನಾ ಅನುಪಸ್ಥಿತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿದ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಮುಗ್ಗರಿಸಿದೆ. ಇದರ ನಡುವೆ ಸುರೇಶ್ ರೈನಾ ಅವರ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅತ್ಯಂತ ನಂಬಿಕಸ್ಥ ಬ್ಯಾಟ್ಸ್ಮನ್ ಆಗಿ ಗುರುತಿಸಿಕೊಂಡಿದ್ದ ಸುರೇಶ್ ರೈನಾ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ತವರಿಗೆ ವಾಪಾಸಾಗಿದ್ದರು.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅತ್ಯಂತ ನಂಬಿಕಸ್ಥ ಬ್ಯಾಟ್ಸ್ಮನ್ ಆಗಿ ಗುರುತಿಸಿಕೊಂಡಿದ್ದ ಸುರೇಶ್ ರೈನಾ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ತವರಿಗೆ ವಾಪಾಸಾಗಿದ್ದರು.
29
ಸುರೇಶ್ ರೈನಾ ವೈಯುಕ್ತಿಕ ಕಾರಣದಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿದ್ದಾಗಿ ತಿಳಿಸಿದ್ದರೂ ಅವರ ಈ ನಿರ್ಧಾರದ ಬಗ್ಗೆ ಸಾಕಷ್ಟು ಗಾಳಿ ಸುದ್ದಿಗಳು ಹರಿದಾಡಿದ್ದವು.
ಸುರೇಶ್ ರೈನಾ ವೈಯುಕ್ತಿಕ ಕಾರಣದಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿದ್ದಾಗಿ ತಿಳಿಸಿದ್ದರೂ ಅವರ ಈ ನಿರ್ಧಾರದ ಬಗ್ಗೆ ಸಾಕಷ್ಟು ಗಾಳಿ ಸುದ್ದಿಗಳು ಹರಿದಾಡಿದ್ದವು.
39
ತವರಿಗೆ ಮರಳಿದ ಬಳಿಕ ಮತ್ತೆ ನಾನು ತಂಡವನ್ನು ಕೂಡಿಕೊಂಡರೂ ಅಚ್ಚರಿಯಿಲ್ಲ ಎಂದು ಸಿಎಸ್ಕೆ ಉಪನಾಯಕ ರೈನಾ ಹೇಳುವ ಮೂಲಕ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದ್ದರು.
ತವರಿಗೆ ಮರಳಿದ ಬಳಿಕ ಮತ್ತೆ ನಾನು ತಂಡವನ್ನು ಕೂಡಿಕೊಂಡರೂ ಅಚ್ಚರಿಯಿಲ್ಲ ಎಂದು ಸಿಎಸ್ಕೆ ಉಪನಾಯಕ ರೈನಾ ಹೇಳುವ ಮೂಲಕ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದ್ದರು.
49
ಇದರ ನಡುವೆ ರೈನಾ ಸ್ಥಾನಕ್ಕೆ ಯಾವೊಬ್ಬ ಬದಲಿ ಆಟಗಾರನನ್ನು ತಂಡಕ್ಕೆ ಸೇರಿಸಿಕೊಳ್ಳದೇ ಇರುವುದು ರೈನಾ ಹೇಳಿಕೆಗೆ ಮತ್ತಷ್ಟು ಇಂಬು ನೀಡುವಂತಿತ್ತು.
ಇದರ ನಡುವೆ ರೈನಾ ಸ್ಥಾನಕ್ಕೆ ಯಾವೊಬ್ಬ ಬದಲಿ ಆಟಗಾರನನ್ನು ತಂಡಕ್ಕೆ ಸೇರಿಸಿಕೊಳ್ಳದೇ ಇರುವುದು ರೈನಾ ಹೇಳಿಕೆಗೆ ಮತ್ತಷ್ಟು ಇಂಬು ನೀಡುವಂತಿತ್ತು.
59
ಕಳಪೆ ಪ್ರದರ್ಶನದಿಂದ ಒತ್ತಡಕ್ಕೆ ಸಿಲುಕಿರುವ ಚೆನ್ನೈ ಸೂಪರ್ ಕಿಂಗ್ಸ್ ನೆರವಿಗೆ ಸುರೇಶ್ ರೈನಾ ಬರಬಹುದು, ರೈನಾ ಐಪಿಎಲ್ಗೆ ವಾಪಸಾಗಬಹುದು ಎನ್ನುವ ಅಭಿಮಾನಿಗಳ ನಿರೀಕ್ಷೆ ಹುಸಿಯಾಗಿದೆ.
ಕಳಪೆ ಪ್ರದರ್ಶನದಿಂದ ಒತ್ತಡಕ್ಕೆ ಸಿಲುಕಿರುವ ಚೆನ್ನೈ ಸೂಪರ್ ಕಿಂಗ್ಸ್ ನೆರವಿಗೆ ಸುರೇಶ್ ರೈನಾ ಬರಬಹುದು, ರೈನಾ ಐಪಿಎಲ್ಗೆ ವಾಪಸಾಗಬಹುದು ಎನ್ನುವ ಅಭಿಮಾನಿಗಳ ನಿರೀಕ್ಷೆ ಹುಸಿಯಾಗಿದೆ.
69
ಇದೀಗ ಎಡಗೈ ಬ್ಯಾಟ್ಸ್ಮನ್ ಸುರೇಶ್ ರೈನಾ ಹಾಗೂ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬಗ್ಗೆ ಸಿಎಸ್ಕೆ ಫ್ರಾಂಚೈಸಿ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಇದೀಗ ಎಡಗೈ ಬ್ಯಾಟ್ಸ್ಮನ್ ಸುರೇಶ್ ರೈನಾ ಹಾಗೂ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬಗ್ಗೆ ಸಿಎಸ್ಕೆ ಫ್ರಾಂಚೈಸಿ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
79
ಚೆನ್ನೈ ತಂಡ ತನ್ನ ಅಧಿಕೃತ ವೆಬ್ಸೈಟ್ನಿಂದ ರೈನಾ ಹೆಸರು, ಫೋಟೋವನ್ನು ತೆಗೆದುಹಾಕಿ ಈ ಆವೃತ್ತಿಯಲ್ಲಿ ಆಡುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದೆ.
ಚೆನ್ನೈ ತಂಡ ತನ್ನ ಅಧಿಕೃತ ವೆಬ್ಸೈಟ್ನಿಂದ ರೈನಾ ಹೆಸರು, ಫೋಟೋವನ್ನು ತೆಗೆದುಹಾಕಿ ಈ ಆವೃತ್ತಿಯಲ್ಲಿ ಆಡುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದೆ.
89
ಇತ್ತೀಚೆಗಷ್ಟೇ ಸಿಎಸ್ಕೆ ತಂಡದ ಸಿಇಒ ಕಾಶಿ ವಿಶ್ವನಾಥನ್, ಐಪಿಎಲ್ನಿಂದ ಹಿಂದೆ ಸರಿಯುವುದು ರೈನಾ ಅವರ ವೈಯಕ್ತಿಕ ನಿರ್ಧಾರ, ನಾವು ಅದನ್ನು ಗೌರವಿಸುತ್ತೇವೆ ಎಂದಿದ್ದರು.
ಇತ್ತೀಚೆಗಷ್ಟೇ ಸಿಎಸ್ಕೆ ತಂಡದ ಸಿಇಒ ಕಾಶಿ ವಿಶ್ವನಾಥನ್, ಐಪಿಎಲ್ನಿಂದ ಹಿಂದೆ ಸರಿಯುವುದು ರೈನಾ ಅವರ ವೈಯಕ್ತಿಕ ನಿರ್ಧಾರ, ನಾವು ಅದನ್ನು ಗೌರವಿಸುತ್ತೇವೆ ಎಂದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.