ಅಬುಧಾಬಿ: ಸಾಂಪ್ರದಾಯಿಕ ಎದುರಾಳಿಯಾದ ಕೋಲ್ಕತ ನೈಟ್ ರೈಡರ್ಸ್ ಎದುರು ಅಕ್ಟೋಬರ್ 21ರಂದು ಅಬುಧಾಬಿಯ ಶೇಕ್ ಜಾಯೆದ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಗೆಲುವು ದಾಖಲಿಸಿದೆ.
ಈ ಗೆಲುವಿನೊಂದಿಗೆ ಆರ್ಸಿಬಿ ತಂಡ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ಗೆ ಮತ್ತಷ್ಟು ಹತ್ತಿರವಾಗಿದೆ. ಕೋಲ್ಕತ ವಿರುದ್ಧ ಭರ್ಜರಿ ಗೆಲುವು ದಾಖಲಿಸಲು ಕಾರಣವಾಗಿದ್ದು, ಆರ್ಸಿಬಿ ವೇಗಿ ಮೊಹಮ್ಮದ್ ಸಿರಾಜ್. ಹೈದರಾಬಾದ್ ವೇಗಿ ಸಿರಾಜ್ ಈ ಹಿಂದೆ ಟೀಂ ಇಂಡಿಯಾ ನಾಯಕರಾಗಿದ್ದ ಮಹೇಂದ್ರ ಸಿಂಗ್ ಧೋನಿ ಹೇಳಿದ ಮಾತೊಂದನ್ನು ನೆನಪಿಸಿಕೊಂಡಿದ್ದಾರೆ.
ಆರ್ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಕೋಲ್ಕತ ನೈಟ್ ರೈಡರ್ಸ್ ವಿರುದ್ಧದ ಪಂದ್ಯ ಮುಕ್ತಾಯವಾಗುವಷ್ಟರಲ್ಲೇ ಎಲ್ಲರ ಹುಬ್ಬೇರುವಂತ ಪ್ರದರ್ಶನ ತೋರಿ ಸೈ ಎನಿಸಿಕೊಂಡಿದ್ದಾರೆ.
ಆರ್ಸಿಬಿ ವೇಗಿ ಮೊಹಮ್ಮದ್ ಸಿರಾಜ್ ಕೋಲ್ಕತ ನೈಟ್ ರೈಡರ್ಸ್ ವಿರುದ್ಧದ ಪಂದ್ಯ ಮುಕ್ತಾಯವಾಗುವಷ್ಟರಲ್ಲೇ ಎಲ್ಲರ ಹುಬ್ಬೇರುವಂತ ಪ್ರದರ್ಶನ ತೋರಿ ಸೈ ಎನಿಸಿಕೊಂಡಿದ್ದಾರೆ.
211
ಕೋಲ್ಕತ ನೈಟ್ ರೈಡರ್ಸ್ ವಿರುದ್ಧ 4 ಓವರ್ ಬೌಲಿಂಗ್ ಮಾಡಿ 2 ಮೇಡನ್ ಸಹಿತ ಕೇವಲ 8 ರನ್ ನೀಡಿ ಪ್ರಮುಖ 4 ವಿಕೆಟ್ ಕಬಳಿಸುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾಗಿದ್ದರು.
ಕೋಲ್ಕತ ನೈಟ್ ರೈಡರ್ಸ್ ವಿರುದ್ಧ 4 ಓವರ್ ಬೌಲಿಂಗ್ ಮಾಡಿ 2 ಮೇಡನ್ ಸಹಿತ ಕೇವಲ 8 ರನ್ ನೀಡಿ ಪ್ರಮುಖ 4 ವಿಕೆಟ್ ಕಬಳಿಸುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾಗಿದ್ದರು.
311
ಐಪಿಎಲ್ ಇತಿಹಾಸದಲ್ಲಿ ಸತತ 2 ಮೇಡನ್ ಓವರ್ ಬೌಲಿಂಗ್ ಮಾಡಿದ ಏಕೈಕ ಬೌಲರ್ ಎನ್ನುವ ದಾಖಲೆಗೂ ಸಿರಾಜ್ ಭಾಜನರಾಗಿದ್ದರು.
ಐಪಿಎಲ್ ಇತಿಹಾಸದಲ್ಲಿ ಸತತ 2 ಮೇಡನ್ ಓವರ್ ಬೌಲಿಂಗ್ ಮಾಡಿದ ಏಕೈಕ ಬೌಲರ್ ಎನ್ನುವ ದಾಖಲೆಗೂ ಸಿರಾಜ್ ಭಾಜನರಾಗಿದ್ದರು.
411
ಮೊದಲ 2 ಓವರ್ನಲ್ಲೇ ಸಿರಾಜ್ ಕೆಕೆಆರ್ ತಂಡ ಸ್ಫೋಟಕ ಬ್ಯಾಟ್ಸ್ಮನ್ಗಳಾದ ರಾಹುಲ್ ತ್ರಿಪಾಠಿ, ಟಾಮ್ ಬಾಂಟನ್ ಹಾಗೂ ನಿತೀಶ್ ರಾಣಾ ಅವರನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾಗಿದ್ದರು.
ಮೊದಲ 2 ಓವರ್ನಲ್ಲೇ ಸಿರಾಜ್ ಕೆಕೆಆರ್ ತಂಡ ಸ್ಫೋಟಕ ಬ್ಯಾಟ್ಸ್ಮನ್ಗಳಾದ ರಾಹುಲ್ ತ್ರಿಪಾಠಿ, ಟಾಮ್ ಬಾಂಟನ್ ಹಾಗೂ ನಿತೀಶ್ ರಾಣಾ ಅವರನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾಗಿದ್ದರು.
511
ಮೊಹಮ್ಮದ್ ಸಿರಾಜ್ ಬೌಲಿಂಗ್ ಪ್ರದರ್ಶನದ ಬಗ್ಗೆ ಕ್ರಿಕೆಟ್ ಪಂಡಿತರಿಂದ ಹಿಡಿದು ಅಭಿಮಾನಿಗಳವರೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೊಹಮ್ಮದ್ ಸಿರಾಜ್ ಬೌಲಿಂಗ್ ಪ್ರದರ್ಶನದ ಬಗ್ಗೆ ಕ್ರಿಕೆಟ್ ಪಂಡಿತರಿಂದ ಹಿಡಿದು ಅಭಿಮಾನಿಗಳವರೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
611
ಈ ಹಿಂದೆ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ದುಬಾರಿ ಬೌಲಿಂಗ್ ಮೂಲಕ ಸಾಕಷ್ಟು ಟ್ರೋಲ್ ಆಗುತ್ತಿದ್ದ ಸಿರಾಜ್, ಇದೀಗ ತಮ್ಮ ಅಮೋಘ ಪ್ರದರ್ಶನದ ಮೂಲಕ ಎಲ್ಲಾ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ
ಈ ಹಿಂದೆ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ದುಬಾರಿ ಬೌಲಿಂಗ್ ಮೂಲಕ ಸಾಕಷ್ಟು ಟ್ರೋಲ್ ಆಗುತ್ತಿದ್ದ ಸಿರಾಜ್, ಇದೀಗ ತಮ್ಮ ಅಮೋಘ ಪ್ರದರ್ಶನದ ಮೂಲಕ ಎಲ್ಲಾ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ
711
ಇನ್ನೊಬ್ಬರನ್ನು ಜಡ್ಜ್ ಮಾಡುವವರಿಗೆ, ಟೀಕೆ ಮಾಡುವವರಿಗೆ ಮತ್ತೊಬ್ಬರ ಸಂಕಷ್ಟ, ಪರಿಸ್ಥಿತಿಗಳು ಅರ್ಥವಾಗುವುದಿಲ್ಲ. ಕೋಟ್ಯಾಂತರ ಜನರ ಎದುರು ಆಡುವುದು ಸುಲಭದ ಮಾತಲ್ಲ.
ಇನ್ನೊಬ್ಬರನ್ನು ಜಡ್ಜ್ ಮಾಡುವವರಿಗೆ, ಟೀಕೆ ಮಾಡುವವರಿಗೆ ಮತ್ತೊಬ್ಬರ ಸಂಕಷ್ಟ, ಪರಿಸ್ಥಿತಿಗಳು ಅರ್ಥವಾಗುವುದಿಲ್ಲ. ಕೋಟ್ಯಾಂತರ ಜನರ ಎದುರು ಆಡುವುದು ಸುಲಭದ ಮಾತಲ್ಲ.
811
ಪ್ರತಿಯೊಬ್ಬ ಆಟಗಾರನಿಗೂ ಒಂದು ಒಳ್ಳೆಯ ದಿನ ಹಾಗೆಯೇ ಕೆಟ್ಟ ದಿನವೆಂದು ಇರುತ್ತದೆ. ಒಮ್ಮೆ ಕೆಟ್ಟ ಬೌಲಿಂಗ್ ಪ್ರದರ್ಶನ ಮಾಡಿದ್ದಕ್ಕೆ ಆತ ಕೆಟ್ಟ ಬೌಲರ್ ಎಂದರ್ಥವಲ್ಲ ಎಂದು ಸಿರಾಜ್ ಅರ್ಸಿಬಿ ಯೂಟ್ಯೂಬ್ ಚಾನೆಲ್ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರತಿಯೊಬ್ಬ ಆಟಗಾರನಿಗೂ ಒಂದು ಒಳ್ಳೆಯ ದಿನ ಹಾಗೆಯೇ ಕೆಟ್ಟ ದಿನವೆಂದು ಇರುತ್ತದೆ. ಒಮ್ಮೆ ಕೆಟ್ಟ ಬೌಲಿಂಗ್ ಪ್ರದರ್ಶನ ಮಾಡಿದ್ದಕ್ಕೆ ಆತ ಕೆಟ್ಟ ಬೌಲರ್ ಎಂದರ್ಥವಲ್ಲ ಎಂದು ಸಿರಾಜ್ ಅರ್ಸಿಬಿ ಯೂಟ್ಯೂಬ್ ಚಾನೆಲ್ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
911
ಇನ್ನು ಇದೇ ವೇಳೆ ಟೀಕಾಕಾರರ ಬಗ್ಗೆ ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ನೀಡಿದ ಮುತ್ತಿನಂಥ ಮಾತನ್ನು ನೆನಪಿಸಿಕೊಂಡಿದ್ದಾರೆ.
ಇನ್ನು ಇದೇ ವೇಳೆ ಟೀಕಾಕಾರರ ಬಗ್ಗೆ ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ನೀಡಿದ ಮುತ್ತಿನಂಥ ಮಾತನ್ನು ನೆನಪಿಸಿಕೊಂಡಿದ್ದಾರೆ.
1011
ಜನರ ಅಥವಾ ಟೀಕಾಕಾರರ ಬಗ್ಗೆ ನೀನು ಹೆಚ್ಚು ತಲೆಕೆಡಿಸಿಕೊಳ್ಳಬೇಡ ಧೋನಿ ಯಾವಾಗಲೂ ಹೇಳುತ್ತಿದ್ದರು. ನೀನು ಕೆಟ್ಟ ಪ್ರದರ್ಶನ ತೋರಿದರೆ ನಿನ್ನ ಮೇಲೆ ಟೀಕೆಗಳ ಸುರಿಮಳೆ ಸುರಿಸುತ್ತಾರೆ. ನೀನು ಅದರ ಬಗ್ಗೆಯೇ ಹೆಚ್ಚು ಯೋಚಿಸುತ್ತಾ ಕುಳಿತರೆ ಹುಚ್ಚನಾಗಿ ಬಿಡುತ್ತೀಯ.
ಜನರ ಅಥವಾ ಟೀಕಾಕಾರರ ಬಗ್ಗೆ ನೀನು ಹೆಚ್ಚು ತಲೆಕೆಡಿಸಿಕೊಳ್ಳಬೇಡ ಧೋನಿ ಯಾವಾಗಲೂ ಹೇಳುತ್ತಿದ್ದರು. ನೀನು ಕೆಟ್ಟ ಪ್ರದರ್ಶನ ತೋರಿದರೆ ನಿನ್ನ ಮೇಲೆ ಟೀಕೆಗಳ ಸುರಿಮಳೆ ಸುರಿಸುತ್ತಾರೆ. ನೀನು ಅದರ ಬಗ್ಗೆಯೇ ಹೆಚ್ಚು ಯೋಚಿಸುತ್ತಾ ಕುಳಿತರೆ ಹುಚ್ಚನಾಗಿ ಬಿಡುತ್ತೀಯ.
1111
ಇದರ ಬದಲು ಮುಂದಾಗುವ ಪಂದ್ಯಗಳ ಬಗ್ಗೆ ಯೋಚಿಸು. ಆ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದರೆ ಈ ಹಿಂದೆ ಯಾರೆಲ್ಲಾ ನಿನ್ನ ಟೀಕಿಸಿದ್ದರೋ ಅವರೇ ನಿನ್ನನ್ನು ಹೊತ್ತು ಮೆರೆಸುತ್ತಾರೆ. ಹೀಗಾಗಿ ಇಂತವರನ್ನು ನೀನು ಗಂಭೀರವಾಗಿ ತೆಗೆದುಕೊಳ್ಳಬೇಡ ಎಂದು ಮಹಿ ಅಣ್ಣ ಹೇಳುತ್ತಿದ್ದರು ಎಂದು ಸಿರಾಜ್ ಧೋನಿಯ ಸ್ಪೋರ್ತಿದಾಯಕ ಮಾತುಗಳನ್ನು ನೆನಪಿಸಿಕೊಂಡಿದ್ದಾರೆ.
ಇದರ ಬದಲು ಮುಂದಾಗುವ ಪಂದ್ಯಗಳ ಬಗ್ಗೆ ಯೋಚಿಸು. ಆ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದರೆ ಈ ಹಿಂದೆ ಯಾರೆಲ್ಲಾ ನಿನ್ನ ಟೀಕಿಸಿದ್ದರೋ ಅವರೇ ನಿನ್ನನ್ನು ಹೊತ್ತು ಮೆರೆಸುತ್ತಾರೆ. ಹೀಗಾಗಿ ಇಂತವರನ್ನು ನೀನು ಗಂಭೀರವಾಗಿ ತೆಗೆದುಕೊಳ್ಳಬೇಡ ಎಂದು ಮಹಿ ಅಣ್ಣ ಹೇಳುತ್ತಿದ್ದರು ಎಂದು ಸಿರಾಜ್ ಧೋನಿಯ ಸ್ಪೋರ್ತಿದಾಯಕ ಮಾತುಗಳನ್ನು ನೆನಪಿಸಿಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.