RCB ಎದುರಿಸುತ್ತಿರುವ ಪ್ರಮುಖ ಸಮಸ್ಯೆ ಏನು ಎನ್ನುವ ಗುಟ್ಟು ಬಿಚ್ಚಿಟ್ಟ ಯುಜುವೇಂದ್ರ ಚಹಲ್..!
First Published Aug 21, 2020, 10:17 AM ISTಬೆಂಗಳೂರು: ಕಳೆದ 12 ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಇದೀಗ ದುಬೈನಲ್ಲಿ ಆರಂಭವಾಗಲಿರುವ 13ನೇ ಆವೃತ್ತಿಯಲ್ಲಿ ಪ್ರಶಸ್ತಿಯ ಬರ ನೀಗಿಸಿಕೊಳ್ಳಲು ವಿರಾಟ್ ಕೊಹ್ಲಿ ನೇತೃತ್ವದ ಆರ್ಸಿಬಿ ಪಡೆ ಚಿತ್ತ ನೆಟ್ಟಿದೆ. ಟೂರ್ನಿ ಆರಂಭಕ್ಕೂ ಮುನ್ನವೇ ತಂಡದ ಸ್ಟಾರ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಈ ಹಿಂದೆ ಆರ್ಸಿಬಿ ಎದುರಿಸುತ್ತಿದ್ದ ಸಮಸ್ಯೆಗಳೇನು ಎನ್ನುವ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.