ಇವರು ಚಾಮರಾಜನಗರದ ಪರಿಸರ ಪ್ರೇಮಿ ವೆಂಕಟೇಶ್. ಈಗಾಗ್ಲೇ ಜಿಲ್ಲಾದ್ಯಂತ 10 ಸಾವಿರಕ್ಕೂ ಹೆಚ್ಚು ಗಿಡ ನೆಟ್ಟು ಹೆಸರು ಕೂಡ ಪಡೆದಿದ್ದಾರೆ. ಎರಡು ವರ್ಷದ ಹಿಂದೆ ಚಾಮರಾಜನಗರ ಹೊರ ವಲಯದ ಬೇಡರಪುರ ಬಳಿಯ ಚಾಮರಾಜನಗರ ಅಂಬೇಡ್ಕರ್ ವಿಶ್ವವಿದ್ಯಾಲಯದ ಬಳಿಯ ರಸ್ತೆ ಬದಿ ಹಾಗೂ ಆವರಣದಲ್ಲಿ ವಿವಿ ಅನುಮತಿ ಪಡೆದು ಸುಮಾರು 400 ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟಿ ಪೋಷಣೆ ಮಾಡಿದ್ದಾರೆ. ಆದ್ರೆ ಸಾಮಾಜಿಕ ಅರಣ್ಯ ವಲಯದ ಅಧಿಕಾರಿಗಳು 2024-25 ರ ಸಾಲಿನಲ್ಲಿ ಗಿಡ ನೆಡುವ ಕಾರ್ಯಕ್ರಮ ಎಂದು ತೋರಿಸಿ 1.87 ಲಕ್ಷ ರೂ ಎಂದು ಬರೆಸಲಾಗಿದೆ.