ಲಕ್ಕುಂಡಿಗೆ ರಾಜ್ಯ ಸರ್ಕಾರದಿಂದ 2.25 ಕೋಟಿ; 15 ದಿನದ ಉತ್ಖನನದಲ್ಲಿ ಸಿಕ್ಕಿದ್ದೇನು?

Published : Feb 03, 2026, 08:11 AM IST

ಗದಗ ಜಿಲ್ಲೆಯ ಐತಿಹಾಸಿಕ ತಾಣ ಲಕ್ಕುಂಡಿಗೆ ವಿದೇಶಿ ತಜ್ಞರು ಭೇಟಿ ನೀಡಿ ಅಭಿವೃದ್ಧಿ ಯೋಜನೆ ರೂಪಿಸುತ್ತಿದ್ದಾರೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ನಡೆಯುತ್ತಿರುವ ಉತ್ಖನನದಲ್ಲಿ ಪಚ್ಚೆ ಹರಳುಗಳು ಸೇರಿದಂತೆ 40ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ.

PREV
15
ಐತಿಹಾಸಿಕ ತಾಣ ಲಕ್ಕುಂಡಿ

ಗದಗ ಜಿಲ್ಲೆಯ ಪ್ರಸಿದ್ಧ ಐತಿಹಾಸಿಕ ತಾಣ ಲಕ್ಕುಂಡಿ ಈಗ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದು, ಭಾನುವಾರ ಮತ್ತು ಸೋಮವಾರ ವಿದೇಶಿ ತಜ್ಞರ ಭೇಟಿಯ ಮೂಲಕ ಗಮನ ಸೆಳೆಯುತ್ತಿದ್ದು, ಇತ್ತ ಉತ್ಖನನ ಕಾರ್ಯವೂ ಮುಂದುವರಿಯಿತು. ಇಟಲಿ ಹಾಗೂ ಗ್ರೀಸ್ ದೇಶದ ತಜ್ಞರನ್ನೊಳಗೊಂಡ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಲಕ್ಕುಂಡಿಯಲ್ಲಿನ ಅಭಿವೃದ್ಧಿ ಕಾರ್ಯಗಳು, ಮತ್ತು ಉತ್ಖನನ ಕುರಿತು ಮಾಹಿತಿ ಸಂಗ್ರಹಿಸಿದರು.

25
3 ಎಕರೆ ಜಾಗದಲ್ಲಿ ಹರಡಿರುವ ಬಯಲು ವಸ್ತು ಸಂಗ್ರಹಾಲಯ

ಡೆಕ್ಕನ್ ಹೆರಿಟೇಜ್ ಫೌಂಡೇಶನ್‌ನ ಮುಖ್ಯಸ್ಥರಾದ ಡಾ. ಹೆಲೆನ್ ನೇತೃತ್ವದ ತಜ್ಞರ ತಂಡ ಲಕ್ಕುಂಡಿಗೆ ಭೇಟಿ ನೀಡಿ, ಇಲ್ಲಿನ ಪ್ರಾಚ್ಯಾವಶೇಷಗಳು ಹಾಗೂ ದೇವಸ್ಥಾನಗಳ ವಾಸ್ತುಶಿಲ್ಪವನ್ನು ಕೂಲಂಕಷವಾಗಿ ಪರಿಶೀಲಿಸಿತು. ಸುಮಾರು 3 ಎಕರೆ ಜಾಗದಲ್ಲಿ ಹರಡಿರುವ ಬಯಲು ವಸ್ತು ಸಂಗ್ರಹಾಲಯವನ್ನು ಅತ್ಯಾಧುನಿಕ ಹಾಗೂ ಪ್ರವಾಸಿಸ್ನೇಹಿಯನ್ನಾಗಿ ರೂಪಿಸಲು ಈ ತಂಡ ಯೋಜನೆ ಸಿದ್ಧಪಡಿಸುತ್ತಿದೆ.

35
ನೂತನ ಯೋಜನೆ, ₹2.25 ಕೋಟಿ ಅನುದಾನ

ರಾಜ್ಯ ಸರ್ಕಾರವು ಲಕ್ಕುಂಡಿ ಅಭಿವೃದ್ಧಿಗೆ ₹2.25 ಕೋಟಿ ಅನುದಾನ ಮೀಸಲಿಟ್ಟಿದ್ದು, ವಿದೇಶಿ ಸಂಸ್ಥೆಯು ಸರ್ಕಾರದ ಟೆಂಡರ್ ಪಡೆದು ಈ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಿದೆ. ಶೀಘ್ರದಲ್ಲೇ ಈ ತಂಡವು ಸಮಗ್ರ ಪ್ರೊಜೆಕ್ಟ್ ರಿಪೋರ್ಟ್ ಸಿದ್ಧಪಡಿಸಲಿದೆ. ಪ್ರವಾಸಿಗರಿಗೆ ನೆರವಾಗಲು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶೇಷ ಗೈಡ್ ಬುಕ್ ಸಿದ್ಧಪಡಿಸುವ ಜವಾಬ್ದಾರಿಯನ್ನು ಫೌಂಡೇಶನ್ ನಿರ್ವಹಿಸಲಿದ್ದು, ಇದರಿಂದಾಗಿ ಲಕ್ಕುಂಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತಷ್ಟು ಮೆರುಗು ದೊರೆಯಲಿದೆ.

45
15ನೇ ದಿನದ ಉತ್ಖನನ

ಇನ್ನೊಂದೆಡೆ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ ನಡೆಯುತ್ತಿರುವ ಉತ್ಖನನವು ಸೋಮವಾರ 15ನೇ ದಿನಕ್ಕೆ ಕಾಲಿಟ್ಟಿದೆ. ಈ ಪ್ರಕ್ರಿಯೆಯಲ್ಲಿ ಇದುವರೆಗೆ 40ಕ್ಕೂ ಹೆಚ್ಚು ಅಪರೂಪದ ಪ್ರಾಚೀನ ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. 

ವಿಶೇಷವಾಗಿ ಪಚ್ಚೆ ಹರಳುಗಳು, ಪ್ರಾಚೀನ ಮೂಳೆಗಳು, ನಾಗರ ಕಲ್ಲುಗಳು ಹಾಗೂ ವಿವಿಧ ಪೀಠಗಳು ಲಭ್ಯವಾಗಿದ್ದು, ಭೂಮಿಯ ಆಳದಲ್ಲಿ ಇನ್ನೂ ಅನೇಕ ರಹಸ್ಯಗಳು ಅಡಗಿರುವ ನಿರೀಕ್ಷೆ ಇದ್ದು, ಮುಂಬರುವ ದಿನಗಳಲ್ಲಿ ನಡೆಯುವ ಉತ್ಖನನ ಹೆಚ್ಚು ಮಹತ್ವ ಪಡೆಯಲಿದೆ.

ಇದನ್ನೂ ಓದಿ: ಲಕ್ಕುಂಡಿಗೆ ಆಗಮಿಸಿದ ಇಟಲಿ-ಗ್ರೀಸ್ ಡೆಕ್ಕನ್ ಹೆರಿಟೇಜ್ ಫೌಂಡೇಶನ್: ಯಾಕೆ ಈ ಭೇಟಿ?

55
ವಿಶೇಷ ಯೋಜನೆ

ವಿದೇಶಿ ತಜ್ಞರ ತಂಡ ಲಕ್ಕುಂಡಿಯ ಪರಂಪರೆಯನ್ನು ಕಂಡು ಬೆರಗಾಗಿದೆ. ಸರ್ಕಾರ ಹಾಗೂ ಈ ಫೌಂಡೇಶನ್ ಸಹಯೋಗದಲ್ಲಿ ಲಕ್ಕುಂಡಿಯನ್ನು ವಿಶ್ವದರ್ಶನ ಮಾಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ ವಿಶೇಷ ಯೋಜನೆ ರೂಪಿಸಿಲಾಗಿದೆ. ಅದಕ್ಕಾಗಿ ಸರ್ಕಾರ ಅನುದಾನವನ್ನು ಮೀಸಲಿಟ್ಟಿದೆ ಎಂದು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಶರಣು ಗೋಗೇರಿ ತಿಳಿಸಿದರು.

ಇದನ್ನೂ ಓದಿ: 9ನೇ ದಿನ ಉತ್ಖನನದಲ್ಲಿ ಲಕ್ಕುಂಡಿ ಮನೆಯ ಗೋಡೆಗಳಲ್ಲೂ ಅದ್ಭುತ ಐತಿಹಾಸಿಕ ಕುರುಹು ಪತ್ತೆ

Read more Photos on
click me!

Recommended Stories