ಕರ್ತವ್ಯ ನಿರತ ಎಎಸ್ಐ ಸಾವು: ಕಾರ್ಯನಿರ್ವಹಿಸುವ ಠಾಣೆಯಲ್ಲೇ ಪ್ರಕರಣ ದಾಖಲು

First Published May 20, 2020, 5:43 PM IST

ಕರ್ತವ್ಯದಲ್ಲಿ ಎಎಸ್‌ಐ ಒಬ್ಬರು ಸಾವನ್ನಪ್ಪಿದ್ದಾರೆ. ಕರ್ತವ್ಯದ ಮೇಲೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಸಹಾಯ ಸಬ್ ಇನ್ಸ್‌ಪೆಕ್ಟರ್ ಮೃತಪಟ್ಟಿದ್ದಾರೆ. ದುರ್ದೈವ ಅಂದ್ರೆ ಎಎಸ್‌ಐ ಕರ್ತವ್ಯ ನಿರ್ವಹಿಸುವ ಪೊಲೀಸ್ ಠಾಣೆಯಲ್ಲೆ ಪ್ರಕರಣ ದಾಖಲಾಗಿದೆ.‌

ಕರ್ತವ್ಯದ ಮೇಲೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಸಹಾಯ ಸಬ್ ಇನ್ಸ್‌ಪೆಕ್ಟರ್ ಮೃತಪಟ್ಟಿದ್ದಾರೆ.
undefined
ಕುರುಗೋಡು ಪೊಲೀಸ್ ಠಾಣೆಯ ಎಎಸ್‌ಐ ಪ್ರಲ್ಹಾದ್ (55) ಮೃತಪಟ್ಟವರು.
undefined
ಕರ್ತವ್ಯದ ಮೇಲೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ಮೋರಿಗೆ ಡಿಕ್ಕಿ ಹೊಡೆದಿದ್ದು, ನಂತರ ಅಂಜುರ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ.
undefined
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎಎಸ್‌ಐ ಅವರನ್ನ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
undefined
ಬಳ್ಳಾರಿಯ ಕುರುಗೋಡು ತಾಲೂಕಿನ ಕಲ್ಲುಕಂಭ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಇನ್ನು ಚಾಲಕನ ಸ್ಥಿತಿಯೂ ಗಂಭೀರವಾಗಿದ್ದು, ಅವರನ್ನ ಬಳ್ಳಾರಿ ವಿಮ್ಸ್ ಆಸ್ಪತ್ರೆಗ ದಾಖಲಿಸಲಾಗಿದ್ದು, ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
undefined
click me!