ಪೊಲೀಸರ ಬಲೆಗೆ ಬಿದ್ದ ಆರೋಪಿಗಳು:
ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿದ್ದ ಮೃತದೇಹವನ್ನು ಪತ್ತೆಹಚ್ಚಿದ ಮೋಕಾ ಠಾಣೆ ಪೊಲೀಸರು, ಮೊಬೈಲ್ ಕರೆಗಳ ವಿವರ (CDR) ಆಧಾರದ ಮೇಲೆ ತನಿಖೆ ನಡೆಸಿ ಶ್ವೇತಾ, ಆಕೆಯ ಪತಿ ಮತ್ತು ಸೋದರನನ್ನು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ಕೊಲೆಯಾಗಿರುವ ರೀತಿಯಲ್ಲಿಯೇ, ಇಲ್ಲಿಯೂ ಕೂಡ ಮಹಿಳೆಯ ಕಿರುಕುಳದ ದೂರು ಕೊಲೆಯಲ್ಲಿ ಅಂತ್ಯವಾಗಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ.