ಆದರೆ, ಇದೇ ವಿಚಾರವನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಬಸವರಾಜ್, ಮಹಾಂತೇಶನ ಕೊಲೆಗೆ ಸಂಚು ರೂಪಿಸಿದ್ದಾನೆ. ಮಹಾಂತೇಶನು ಬೆಳಗಾವಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದು, ಪ್ರತಿದಿನ ರಾತ್ರಿ ಕೆಲಸ ಮುಗಿಸಿ ಶಹಾಬಂದರ ಗ್ರಾಮಕ್ಕೆ ಹಿಂದಿರುಗುತ್ತಿದ್ದನು. ಇದನ್ನು ಗಮನಿಸಿದ ಆರೋಪಿಗಳು, ನಿನ್ನೆ ರಾತ್ರಿ ಆತನಿಗಾಗಿ ಕಾದು ಕುಳಿತಿದ್ದಾರೆ.