ಚವ್ಹಾಟ ಗಲ್ಲಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಒಂದೇ ಕುಟುಂಬದ ಆರು ಜನರು ಮೃತಪಟ್ಟಿರುವ ಮನೆಗೆ ಶನಿವಾರ ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್.ಅಶೋಕ ಭೇಟಿ ನೀಡಿದರು. ದುರಂತ ಅಂತ್ಯ ಕಂಡ ಧಮೋನೆ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಬಿಜೆಪಿ ಪಕ್ಷದ ವತಿಯಿಂದ ₹1 ಲಕ್ಷ ಪರಿಹಾರವನ್ನೂ ಕೊಡಲಾಯಿತು.
ಉಭಯ ನಾಯಕರು ಮೃತ ಗಜಾನನ ಧಮೋನೆ ಅವರ ಕುಟುಂಬಸ್ಥರನ್ನು ಮಾತನಾಡಿಸಿ, ಧೈರ್ಯ ತುಂಬುವ ಪ್ರಯತ್ನ ಮಾಡಿದರು. ಈ ವೇಳೆ ಧಮೋನೆ ಕುಟುಂಬಸ್ಥರು ಸರ್ಕಾರದಿಂದ ಈವರೆಗೂ ಪರಿಹಾರ ಬಂದಿಲ್ಲ ಎಂದು ನಾಯಕರ ಮುಂದೆ ಅಳಲು ತೋಡಿಕೊಂಡರು. ತಕ್ಷಣ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಆರ್.ಅಶೋಕ ಅವರು ಕರೆ ಮಾಡಿದರು. ಆಗ ಜಿಲ್ಲಾಡಳಿತದಿಂದ ಪರಿಹಾರ ಕೊಡಲು ಅವಕಾಶ ಇಲ್ಲ ಎಂದರು. ಸಿಎಂ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸಲಾಗುವುದು. ಈ ಸಂಬಂಧ ನಾನೇ ಸಿಎಂ ಡಿ.ಕೆ.ಶಿವಕುಮಾರ ಅವರಿಗೆ ಪತ್ರ ಬರೆಯುವುದಾಗಿ ಆರ್.ಅಶೋಕ ತಿಳಿಸಿದರು.