ವಕ್ಫ್ ಬೋರ್ಡ್ ಬಳಿ ಒನ್-ವೇನಲ್ಲಿ ಬಂದ ಅಯ್ಯಪ್ಪನ ಕಾರು; ಬೈಕ್‌ಗೆ ಡಿಕ್ಕಿ ಹೊಡೆದು ಜುಬೇರ್, ಮುನ್ವಿರ್ ಸಾವು!

Published : Mar 29, 2026, 01:27 PM IST

ಬೆಂಗಳೂರಿನಲ್ಲಿ ಮದ್ಯದ ಅಮಲಿನಲ್ಲಿ ಒನ್ ವೇ ರಸ್ತೆಯಲ್ಲಿ ಅತಿವೇಗವಾಗಿ ಕಾರು ಚಲಾಯಿಸಿದ ಚಾಲಕ, ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದ್ಯದ ನಶೆಯಲ್ಲಿ ಕಾರು ಓಡಿಸಿದ ಅಯ್ಯಪ್ಪನನ್ನ ಪೊಲೀಸರು ಬಂಧಿಸಿದ್ದಾರೆ.

PREV
14
ಒನ್ ವೇನಲ್ಲಿ ಬಂದು ಗುದ್ದಿ ಇಬ್ಬರ ಬಲಿಪಡೆದ ಕುಡುಕ

ಬೆಂಗಳೂರು (ಮಾ.29): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕುಡಿದು ವಾಹನ ಚಲಾಯಿಸುವವರ ಅಟ್ಟಹಾಸಕ್ಕೆ ಮತ್ತಿಬ್ಬರು ಬಲಿಯಾಗಿದ್ದಾರೆ. ಮದ್ಯದ ಅಮಲಿನಲ್ಲಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ, ಒನ್ ವೇನಲ್ಲಿ (ಏಕಮುಖ ಸಂಚಾರ) ಅತಿವೇಗವಾಗಿ ಕಾರು ಚಲಾಯಿಸಿದ ಪರಿಣಾಮ, ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ಘೋರ ಘಟನೆ ನಡೆದಿದೆ.

ಘಟನೆಯ ವಿವರ:

ನಗರದ ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವಕ್ಫ್ ಬೋರ್ಡ್ ಕಚೇರಿ ಸಮೀಪ ಈ ಅಪಘಾತ ಸಂಭವಿಸಿದೆ. ಮೃತರನ್ನು ಜುಬೇರ್ ಅಹಮದ್ (42) ಮತ್ತು ಅಬ್ದುಲ್ ಮುನ್ವೀರ್ ಪಾಷಾ (16) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಇವರಿಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

24
ಕುಡಿದ ಅಮಲಿನಲ್ಲಿದ್ದ ಕಿರಾತಕ ಚಾಲಕ:

ಅಯ್ಯಪ್ಪ ಎಂಬ ವ್ಯಕ್ತಿ ತನ್ನ ವೋಗ್ಸ್ ವ್ಯಾಗನ್ (Volkswagen) ಕಾರನ್ನು ಚಲಾಯಿಸುತ್ತಿದ್ದನು. ಈತ ಸಂಪೂರ್ಣವಾಗಿ ಮದ್ಯ ಸೇವಿಸಿ ನಶೆಯಲ್ಲಿದ್ದ ಎನ್ನಲಾಗಿದೆ. ಮದ್ಯದ ಅಮಲಿನಲ್ಲಿ ರಸ್ತೆಯ ನಿಯಮಗಳನ್ನು ಮರೆತ ಅಯ್ಯಪ್ಪ, ವಾಹನಗಳು ಬರಬಾರದ ಒನ್ ವೇ ರಸ್ತೆಗೆ ನುಗ್ಗಿದ್ದಾನೆ. ಅತಿವೇಗವಾಗಿ ಬಂದ ಕಾರು, ಎದುರಿನಿಂದ ನಿಯಮಬದ್ಧವಾಗಿ ಬರುತ್ತಿದ್ದ ಜುಬೇರ್ ಅಹಮದ್ ಮತ್ತು ಅಬ್ದುಲ್ ಮುನ್ವೀರ್ ಅವರ ಬೈಕ್‌ಗೆ ನೇರ ಮುಖಾಮುಖಿ ಡಿಕ್ಕಿ ಹೊಡೆದಿದೆ.

34
ಸ್ಥಳದಲ್ಲೇ ಕೊನೆಯುಸಿರೆಳೆದ ಸವಾರರು:

ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ತೀವ್ರವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಅಪಘಾತದ ಭೀಕರತೆ ಎಷ್ಟಿತ್ತೆಂದರೆ ಸ್ಥಳೀಯರು ಕ್ಷಣಕಾಲ ದಿಗ್ಭ್ರಾಂತರಾಗಿದ್ದರು. ಘಟನೆ ನಡೆದ ಕೂಡಲೇ ಹೈಗ್ರೌಂಡ್ಸ್ ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. 

ಅಪಘಾತಕ್ಕೆ ಕಾರಣವಾದ ವೋಗ್ಸ್ ವ್ಯಾಗನ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕ ಅಯ್ಯಪ್ಪನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಆತ ಮದ್ಯ ಸೇವಿಸಿರುವುದು ದೃಢಪಟ್ಟಿದೆ. ಸದ್ಯ ಪೊಲೀಸರು ಆರೋಪಿ ಚಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

44
ಸಂಚಾರಿ ನಿಯಮಗಳ ಉಲ್ಲಂಘನೆಗೆ ಬಲಿಯಾದ ಜೀವಗಳು:

ಬೆಂಗಳೂರಿನಲ್ಲಿ ಸಂಚಾರಿ ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ, ವೀಕೆಂಡ್ ಬಂತೆಂದರೆ ಮದ್ಯ ಸೇವಿಸಿ ವಾಹನ ಚಲಾಯಿಸುವವರ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಅಯ್ಯಪ್ಪ ಎಂಬ ಚಾಲಕನ ಬೇಜವಾಬ್ದಾರಿತನ ಮತ್ತು ನಿಯಮಗಳ ಉಲ್ಲಂಘನೆಯಿಂದಾಗಿ ಇಂದು ಎರಡು ಕುಟುಂಬಗಳು ಬೀದಿಗೆ ಬಿದ್ದಿವೆ. 16 ವರ್ಷದ ಬಾಲಕ ಅಬ್ದುಲ್ ಮುನ್ವೀರ್ ಮತ್ತು 42 ವರ್ಷದ ಜುಬೇರ್ ಅಹಮದ್ ಅವರ ಅಕಾಲಿಕ ಸಾವು ಕುಟುಂಬದಲ್ಲಿ ನೋವು ತಂದಿದೆ.

Read more Photos on
click me!

Recommended Stories