ಮೊದಲೇ ಪ್ಲಾನ್ ಮಾಡಿದಂತೆ ಡ್ರಾಗರ್ ಸೇರಿದಂತೆ ಆಯುಧಗಳನ್ನು ಹಿಡಿದು ಸ್ಥಳಕ್ಕೆ ಬಂದ ಆರೋಪಿಗಳು, ನಾಗನಿಗೆ ಮದ್ಯವನ್ನು ಕಂಠಪೂರ್ತಿ ಕುಡಿಸಿ, ನಂತರ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಮಾದನಾಯಕನಹಳ್ಳಿ ಪೊಲೀಸರು ಬಲೆ ಬೀಸಿದ್ದು, ತನಿಖೆ ತೀವ್ರಗೊಳಿಸಲಾಗಿದೆ. ಕೊಲೆಯ ಹಿಂದೆ ಇನ್ನಷ್ಟು ವ್ಯಕ್ತಿಗಳ ಪಾತ್ರವಿದೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.