ಹಾಸನ ಜಿಲ್ಲೆಯಲ್ಲಿ ಆಲೂರು, ಸಕಲೇಶಪುರ, ಬೇಲೂರು ತಾಲ್ಲೂಕಿನ ಜನರು ಕಾಡಾನೆಗಳ ಹಾವಳಿಯಿಂದ ಬೇಸತ್ತಿದ್ದಾರೆ. ಇಲ್ಲಿನ ಕೆಲವು ಗ್ರಾಮಗಳ ಬಳಿಯ ಕಾಫಿ ತೋಟ, ರೈತರ ಜಮೀನುಗಳಲ್ಲೇ ಬೀಡು ಬಿಟ್ಟಿರೋ ಕಾಡಾನೆಗಳು, ರೈತರ ಬೆಳೆಗಳನ್ನು ನಾಶ ಮಾಡುತ್ತಿವೆ. ಇನ್ನು ರೈತರು ಹಾಗೂ ಕಾರ್ಮಿಕರು ಜಮೀನುಗಳಿಗೆ ಹೋಗಲು ಹೆದರುತ್ತಿದ್ದಾರೆ.