ಬಸವನಹಳ್ಳಿ ಮುಖ್ಯ ರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆ ಮೂಲಕ ಸಾಗಿದ ಶೋಭಾಯಾತ್ರೆ ಆಜಾದ್ ವೃತ್ತದಲ್ಲಿ ಕೊನೆಗೊಳ್ತು. ಶೋಭಾಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ದತ್ತ ಭಕ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ರು. ಇನ್ನು ಶೋಭಾಯಾತ್ರೆಯಲ್ಲಿ ಯುವಕ, ಯುವತಿಯರು ರಸ್ತೆ ಉದ್ದಕ್ಕೂ ಹಾಡಿಗೆ ತಕ್ಕಂತೆ ದತ್ತಭಕ್ತರು ಹೆಜ್ಜೆ ಹಾಕಿದರು. ನಗರದ ಹನುಮಂತಪ್ಪ ವೃತ್ತದಿಂದ ಎಮ್ ಜಿ ರಸ್ತೆ ಯ ಉದ್ದಕ್ಕೂ ಡಿ.ಜೆ. ಸದ್ದಿಗೆ ಮನಸ್ಸೋ ಇಚ್ಛೆ ಯುವಕ-ಯುವತಿಯರು ಕುಣಿದುಕಪ್ಪಳಿಸಿದರು.