ಕೊರೋನಾ ವಾರಿಯರ್ಸ್‌ಗೆ ಔತಣಕೂಟ: ಸಚಿವರ ವಿರುದ್ಧ ಸರ್ಕಾರಕ್ಕೆ ದೂರು

First Published Jun 9, 2020, 2:43 PM IST

ಕೊರೋನಾ ವಾರಿಯರರ್ಸ್‌ಗೆ ಕೊಡಗು ಜಿಲ್ಲಾಡಳಿತ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಔತಣ ಕೂಟ ಏರ್ಪಡಿಸಿರುವ ಬಗ್ಗೆ ಇದೀಗ ಸರ್ಕಾರಕ್ಕೆ ದೂರು ನೀಡಲಾಗಿದೆ. ಇಲ್ಲಿವೆ ಫೋಟೋಸ್

ಕೊಡಗು ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ವಿರುದ್ಧ ಸರ್ಕಾರಕ್ಕೆ ದೂರು ನೀಡಲಾಗಿದೆ.
undefined
ಮಡಿಕೇರಿಯ ವಕೀಲ ಕೃಷ್ಣಮೂರ್ತಿ ಎಂಬವರು ಸಚಿವರ ವಿರುದ್ಧ ದೂರು ಸಲ್ಲಿಸಿದ್ದಾರೆ.
undefined
ಪೊಲೀಸ್ ಸಿಬ್ಬಂದಿ ಸೇರಿದಂತೆ ಜಿಲ್ಲೆಯ ಕೊರೋನಾ ವಾರಿಯರ್ಸ್ ಔತಣ ಕೂಟದಲ್ಲಿ ಭಾಗವಹಿಸಿದ್ದರು
undefined
ಕೊರೊನಾ ವಾರಿಯರ್ಸ್‌ಗಾಗಿ ಔತಣ ಕೂಟ ಆಯೋಜನೆ ಮಾಡಲಾಗಿತ್ತು.
undefined
ಬಹುತೇಕ ಎಲ್ಲ ಪೊಲೀಸ್ ಸಿಬ್ಬಂದಿಯೂ ಔತಣಕೂಟದಲ್ಲಿ ಭಾಗಿಯಾಗಿದ್ದರು.
undefined
ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಸೋಮಣ್ಣ ಔತಣ ಕೂಟದಲ್ಲಿ
undefined
ಸರ್ಕಾರದ ನಿಯಮ ಗಾಳಿಗೆ ತೂರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಆರೋಪಿಸಲಾಗಿದೆ.
undefined
ಮಡಿಕೇರಿಯ ಕೊಡವ ಸಮಾಜ ಹಾಗೂ ಮೆಡಿಕಲ್‌ ಕಾಲೇಜಿನಲ್ಲಿ ಔತಣ ಕೂಟ ನಡೆದಿತ್ತು.
undefined
ಜೂ.5 ರಂದು ಕಾರ್ಯಕ್ರಮ ನಡೆದಿದ್ದು, ಉಸ್ತುವಾರಿ ಸಚಿವ ವಿ. ಸೋಮಣ್ಣ ಸಮ್ಮುಖದಲ್ಲಿ ಔತಣಕೂಟ ಆಯೋಜಿಸಲಾಗಿತ್ತು.
undefined
ಔತಣಕೂಟದಲ್ಲಿ ಭಾಗವಹಿಸಿದ ಕೊರೋನಾ ವಾರಿಯರ್ಸ್
undefined
ಕಾರ್ಯಕ್ರಮ ಆಯೋಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸರ್ಕಾರಕ್ಕೆ ದೂರು ನೀಡಲಾಗಿದೆ.
undefined
ಕಾರ್ಯಕ್ರಮದಲ್ಲಿ ಸಚಿವ, ಶಾಸಕರು ಸೇರಿ ಹಲವರು ಭಾಗಿಯಾಗಿದ್ದರು.ಪೊಲೀಸ್, ಆರೋಗ್ಯ ಸಿಬ್ಬಂದಿ ಸೇರಿ ವಿವಿಧ ಇಲಾಖೆಯ ನೂರೈವತ್ತಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದು,ಕ್ರಮ ಕೈಗೊಳ್ಳದಿದ್ದಲ್ಲಿ ಹೈಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.
undefined
ಜನಪ್ರತಿನಿಧಿಗಳಿಗೊಂದು ನ್ಯಾಯ, ಸಾಮಾನ್ಯ ಜನರಿಗೊಂದು ನ್ಯಾಯ. ಇದನ್ನ ಎಲ್ಲರೂ ಖಂಡಿಸಬೇಕು. ಸರ್ಕಾರದ ನಿಯಮ ಎಲ್ಲರಿಗೂ ಒಂದೇ ಎಂದು ಕೃಷ್ಣಮೂರ್ತಿ ತಿಳಿಸಿದ್ದಾರೆ.
undefined
click me!