ಹೇಮಗುಡ್ಡದ ದುರ್ಗಾ ಪರಮೇಶ್ವರಿ ದೇವಸ್ಥಾನದಿಂದ ಪ್ರಾರಂಭಗೊಂಡ ಮೆರವಣಿಗೆ ಕೊಪ್ಪಳ ಮುಖ್ಯ ರಸ್ತೆ ಹಾಗೂ ಬೈ ಪಾಸ್ ರಸ್ತೆ ಮೂಲಕ ಸುಮಾರು 3 ಗಂಟೆಗಳ ಕಾಲ ನಡೆಯಿತು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಶಹನಾಯಿ, ನಂದಿ ಕೋಲು ಕುಣಿತ, ಹಲಗಿ ಮೇಳ ಸೇರಿದಂತೆ ವೈವಿಧ್ಯಮಯ ಜಾನಪದ ನೃತ್ಯ ತಂಡಗಳು ಭಾಗವಹಿಸಿದ್ದವು. ನಗರಸಭೆ ಮಾಜಿ ಅಧ್ಯಕ್ಷ ಜೋಗದ ಹನುಮಂತಪ್ಪ ನಾಯಕ, ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ, ಸಿಪಿಐ ಉದಯ ರವಿ, ಡಾ. ಇಲಿಯಾಸ್ ಬಾಬಾ, ವಿರೂಪಾಕ್ಷಪ್ಪ ಸಿಂಗನಾಳ, ಸಂತೋಷ ಕೆಲೋಜಿ, ಸಿ.ಎಚ್. ರಾಮಕೃಷ್ಣ ಸಿದ್ದಪ್ಪ ನೀರಲೋಟಿ, ರೆಡ್ಡಿ ಶ್ರೀನಿವಾಸ, ಅಮರೇಶ ಹೇರೂರು ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.