ಜಿಲ್ಲಾಡಳಿತದ ವಿರುದ್ಧ ಅಸಮಾಧಾನ:
ಈ ಕುರಿತು ಮಾತನಾಡಿರುವ ಬಜರಂಗದಳದ ಮುಖಂಡ ರಘು ಸಕಲೇಶಪುರ, 'ಧಾರ್ಮಿಕ ದತ್ತಿ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಕಣ್ಣೆದುರೇ ಈ ಅಕ್ರಮಗಳು ನಡೆಯುತ್ತಿದ್ದರೂ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ. ನ್ಯಾಯಾಲಯದ ಆದೇಶದ ಪ್ರಕಾರ ದತ್ತಪೀಠದ ವ್ಯಾಪ್ತಿಯಲ್ಲಿ ಯಾವುದೇ ಹೊಸ ಆಚರಣೆಗಳಿಗೆ ಅಥವಾ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶವಿಲ್ಲ. ಆದರೆ, ಕೋರ್ಟ್ ಆದೇಶವನ್ನು ಇಲ್ಲಿ ಗಾಳಿಗೆ ತೂರಲಾಗುತ್ತಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.