33 ಸ್ವಾಮೀಜಿಗಳ ಉಪಸ್ಥಿತಿ:
ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ಜರುಗಿದ ಈ ಸಭೆಯಲ್ಲಿ, ಸಂಸ್ಥಾನ್ ಹಿರೇಮಠ್ ಬಿಜಾಪುರದ ಡಾ. ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಒಟ್ಟು 33 ಜನ ಸ್ವಾಮೀಜಿಗಳು ಪಾಲ್ಗೊಂಡಿದ್ದರು. ಎಲ್ಲಾ ಸ್ವಾಮೀಜಿಗಳು ಒಮ್ಮತದಿಂದ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಮೂಲತಃ ವಿಜಯಪುರ ಜಿಲ್ಲೆಯವರಾದ ಸೋಮಯ್ಯಾ ಗಣಾಚಾರಿ ಅವರಿಗೆ ಎಂಎಲ್ಸಿ ಸ್ಥಾನ ನೀಡುವ ಮೂಲಕ ರಾಜಕೀಯವಾಗಿ ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಕೋರಿದ್ದಾರೆ.