ಈ ಮಧ್ಯೆ, ಅಂತಾರಾಜ್ಯ ವಾಹನಗಳಿಗೆ ಮೈಸೂರು ನಗರ ಮತ್ತು ಕೆಆರ್ಎಸ್ ಪ್ರವೇಶ ತೆರಿಗೆಯಿಂದ ವಿನಾಯ್ತಿ ನೀಡಿರುವುದು, ಶಾಲೆಗಳಿಗೆ ಮಧ್ಯಂತರ ರಜೆ ಸಿಕ್ಕಿರುವುದು, ವಾರಾಂತ್ಯದ ಜೊತೆಗೆ ಸರ್ಕಾರಿ ರಜೆಗಳು ಸಾಲು, ಸಾಲಾಗಿ ಬಂದಿರುವುದರಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು ಐತಿಹಾಸಿಕ ಕ್ಷಣಕ್ಕೆ ಅರಮನೆ ನಗರಿ ಸಾಕ್ಷಿಯಾಗಿದೆ.