ದಾಲ್ಮಿಯಾ ಸಿಮೆಂಟ್ ಕಾರ್ಖಾನೆ ದುರಂತ: ಓರ್ವ ಸಾವು ಹಲವರಿಗೆ ಗಂಭೀರ ಗಾಯ, ಕಾರ್ಮಿಕರಿಂದ ಕಲ್ಲು ತೂರಾಟ

Published : Dec 03, 2025, 02:53 PM IST

ಬೆಳಗಾವಿ ಜಿಲ್ಲೆಯಲ್ಲಿರುವ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ಎತ್ತರದಿಂದ ಬಿದ್ದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆಯಿಂದ ಆಕ್ರೋಶಗೊಂಡ ಸಹ ಕಾರ್ಮಿಕರು, ಕಾರ್ಖಾನೆಯ ಮೇಲೆ ಕಲ್ಲು ತೂರಾಟ ನಡೆಸಿ ಪ್ರತಿಭಟಿಸಿದ್ದಾರೆ.

PREV
17
ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ಭೀಕರ ದುರಂತ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿರುವ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ನಡೆದ ಭೀಕರ ದುರಂತದಲ್ಲಿ ಓರ್ವ ಕಾರ್ಮಿಕ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಈ ದುರ್ಘಟನೆಯ ನಂತರ, ಸಿಮೆಂಟ್ ಕಾರ್ಖಾನೆಯಲ್ಲಿ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿ ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

27
ಕೆಲಸದ ವೇಳೆ ಆಯತಪ್ಪಿ ಬಿದ್ದು ದುರಂತ

ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಯಾದವಾಡ ಗ್ರಾಮದ ಹೊರವಲಯದಲ್ಲಿರುವ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಆಯತಪ್ಪಿ ಎತ್ತರದಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ಅಪಘಾತದಲ್ಲಿ ರಮೇಶ್ ಬಾಬುಲಾಲ್ ರಾಮ್ ಎಂಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

37
ಇಬ್ಬರಿಗೆ ಗಂಭೀರ ಗಾಯ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರು ಕಾರ್ಮಿಕರನ್ನು ತಕ್ಷಣ ಬಾಗಲಕೋಟೆ ಜಿಲ್ಲೆಯ ಕೆರೊಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ನಂದಕುಮಾರ್ ಮತ್ತು ರಮೇಶ್ ಮಹೇಂದ್ರ ರಾಮ್ ಎಂದು ಗುರುತಿಸಲಾಗಿದೆ. ಇಬ್ಬರೂ ಕಾರ್ಮಿಕರು ಪ್ರಸ್ತುತ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

47
ಸಹ ಕಾರ್ಮಿಕನ ದುರ್ಮರಣಕ್ಕೆ ಆಕ್ರೋಶ

ಮೃತಪಟ್ಟ ರಮೇಶ್ ಬಾಬುಲಾಲ್ ರಾಮ್ ಅವರು ಸೇರಿದಂತೆ ಗಾಯಗೊಂಡಿರುವ ಕಾರ್ಮಿಕರು ಮೂಲತಃ ಬಿಹಾರ ರಾಜ್ಯದಿಂದ ಆಗಮಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಸಹ ಕಾರ್ಮಿಕನ ದುರ್ಮರಣಕ್ಕೆ ಆಕ್ರೋಶಗೊಂಡ ಉಳಿದ ಕಾರ್ಮಿಕರು ತಕ್ಷಣವೇ ಪ್ರತಿಭಟನೆಗಿಳಿದಿದ್ದಾರೆ.

57
ಕಲ್ಲು ತೂರಾಟ ನಡೆಸಿ ಕಾರ್ಮಿಕರ ಆಕ್ರೋಶ

ಕಾರ್ಮಿಕರು ಕಾರ್ಖಾನೆಯ ಆಡಳಿತ ಮಂಡಳಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಾರ್ಖಾನೆಯ ಸೆಕ್ಯುರಿಟಿ ಕಚೇರಿ (ಭದ್ರತಾ ಕಚೇರಿ) ಮೇಲೆ ಕಲ್ಲು ತೂರಾಟ ನಡೆಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ಘಟನೆಯಿಂದಾಗಿ ಕಾರ್ಖಾನೆಯ ಆವರಣದಲ್ಲಿ ಪರಿಸ್ಥಿತಿ ತಾರಕಕ್ಕೇರಿತ್ತು. ಕಾರ್ಮಿಕರ ಸುರಕ್ಷತಾ ಕ್ರಮಗಳ ಕೊರತೆಯೇ ಈ ಅಪಘಾತಕ್ಕೆ ಕಾರಣ ಎಂದು ಕಾರ್ಮಿಕರು ಗಂಭೀರ ಆರೋಪ ಮಾಡಿದ್ದಾರೆ.

67
ಸ್ಥಳದಲ್ಲಿ ಬಿಗುವಿನ ವಾತಾವರಣ, ಪೊಲೀಸರ ಭೇಟಿ

ಕಾರ್ಮಿಕರ ಪ್ರತಿಭಟನೆ ಮತ್ತು ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಕಾರ್ಖಾನೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ, ಕುಲಗೋಡ ಪೊಲೀಸ್ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

77
ನ್ಯಾಯಯುತ ತನಿಖೆ ನಡೆಸುವ ಭರವಸೆ

ಪೊಲೀಸರು ಪ್ರತಿಭಟನಾ ನಿರತ ಕಾರ್ಮಿಕರನ್ನು ಸಮಾಧಾನಪಡಿಸಿ, ಮೃತ ಕಾರ್ಮಿಕನ ಕುಟುಂಬಕ್ಕೆ ಪರಿಹಾರ ದೊರಕಿಸುವ ಹಾಗೂ ಅಪಘಾತದ ಕುರಿತು ನ್ಯಾಯಯುತ ತನಿಖೆ ನಡೆಸುವ ಭರವಸೆ ನೀಡಿದರು. ಮೃತರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಅಪಘಾತಕ್ಕೆ ಕಾರಣವೇನು ಹಾಗೂ ಕಾರ್ಖಾನೆಯಲ್ಲಿ ಸುರಕ್ಷತಾ ನಿಯಮಗಳನ್ನು ಸರಿಯಾಗಿ ಪಾಲಿಸಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read more Photos on
click me!

Recommended Stories