ಕೊರೋನಾ ಮುಕ್ತ ಮೈಸೂರು: ಉಸ್ತುವಾರಿ ಸಚಿವರಿಂದ ಚಾಮುಂಡಿಗೆ ವಿಶೇಷ ಪೂಜೆ

First Published May 16, 2020, 3:27 PM IST

 ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಪೂಜೆ ಸಲ್ಲಿಸಿದ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಿಲ್ಲೆಯ ಹಾಗೂ ರಾಜ್ಯದ ಜನತೆಯನ್ನು ಕಾಪಾಡು ಎಂದು ಕೋರಿಕೊಂಡರು. ಇಲ್ಲಿವೆ ಫೋಟೋಸ್

ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ಎಸ್‌. ಟಿ. ಸೋಮಶೇಖರ್ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
undefined
ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಪೂಜೆ ಸಲ್ಲಿಸಿದ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಿಲ್ಲೆಯ ಹಾಗೂ ರಾಜ್ಯದ ಜನತೆಯನ್ನು ಕಾಪಾಡು ಎಂದು ಕೋರಿಕೊಂಡರು.
undefined
ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಜಿ.ಟಿ.ದೇವೇಗೌಡ, ಪಿ.ರಾಜೀವ್, ಪೊಲೀಸ್ ಆಯುಕ್ತರಾದ ಚಂದ್ರಗುಪ್ತ,ಉಪಸ್ಥಿತರಿದ್ದರು.
undefined
ಮೈಸೂರು ಜಿಲ್ಲೆ ಕೊರೋನಾ ಮುಕ್ತವಾದರೆ ತಾಯಿ ಸನ್ನಿಧಿಗೆ ಬಂದು ಪೂಜೆ ಸಲ್ಲಿಸುವುದಾಗಿ ಕೋರಿಕೊಂಡಿದ್ದೆ ಎಂದು ಅವರು ತಿಳಿಸಿದ್ದಾರೆ.
undefined
ಅಲಂಕೃತಗೊಂಡ ಚಾಮುಂಡಿ ತಾಯಿ ವಿಗ್ರಹ
undefined
ಈಗ ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಜಿಲ್ಲೆಯ ಜನತೆ ಕೊರೋನಾದಿಂದ ಪಾರಾಗಿದ್ದಾರೆ. 90 ಪಾಸಿಟಿವ್ ಪ್ರಕರಣದಿಂದ ಶೂನ್ಯಕ್ಕೆ ಇಳಿದಿದೆ. ಇನ್ನು ಮುಂದೆಯೂ ಆಶೀರ್ವಾದ ಹೀಗೆಯೇ ಇರಲಿ ಎಂದು ತಾಯಿ ಬಳಿ ಕೋರಿಕೊಂಡಿದ್ದಾಗಿ ಸಚಿವರು ತಿಳಿಸಿದರು.
undefined
Mysuru
undefined
ರಾಜ್ಯದಲ್ಲಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ಸಿಕ್ಕಿಲ್ಲ. ಹಾಗಾಗಿ ನಾವೂ ಜನತೆಯಂತೆ ದೇಗುಲದ ಹೊರಗೆ ನಿಂತು ತಾಯಿಗೆ ಪೂಜೆ ಸಲ್ಲಿಸಿ ಮನವಿ ಮಾಡಿದ್ದೇವೆ. ರಾಜ್ಯಾದ್ಯಂತ ದೇಗುಲ ತೆರೆಯುವ ಬಗ್ಗೆ ಸಂಪುಟದಲ್ಲೂ ಚರ್ಚೆಯಾಗಿದೆ. ಆದರೆ, ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
undefined
click me!