Published : Jun 02, 2021, 03:22 PM ISTUpdated : Jun 02, 2021, 03:45 PM IST
ಚಿತ್ರದುರ್ಗ(ಜೂ.02): ಕೊರೋನಾ ಸಂಕಷ್ಟದ ಸಮಯದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯುವ ಮೂಲಕ ತರಳಬಾಳು ಮಠ ಮಾನವೀಯತೆ ಮೆರೆದಿದೆ. ತಾಲೂಕಿನ ಸಿರಿಗೆರೆ ಗ್ರಾಮದ ತರಳಬಾಳು ಮಠದ ಹಾಸ್ಟೆಲ್ನಲ್ಲಿ ಕೋವಿಡ್ ಕೇರ್ ಸೆಂಟರ್ಗೆ ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಇಂದು(ಬುಧವಾರ) ಚಾಲನೆ ನೀಡಿದ್ದಾರೆ. ಈ ಕೋವಿಡ್ ಕೇರ್ ಸೆಂಟರ್ನಿಂದ ಸಾಕಷ್ಟು ಕೋವಿಡ್ ರೋಗಿಗಳಿಗೆ ಇದರ ಪ್ರಯೋಜನ ದೊರೆಯಲಿದೆ.