ರಾಜ್ಯದ ಕೆಲವು ಕಡೆಗಳಲ್ಲಿ ಧರ್ಮದ ಹೆಸರಿನಲ್ಲಿ ಅಶಾಂತಿ ಮೂಡಿಸಲು ಯತ್ನಿಸುವವರಿಗೆ ಇಲ್ಲೊಂದು ಕಣ್ಣು ತೆರೆಸುವಂತಹ ಮಾದರಿ ಘಟನೆ ನಡೆಯುತ್ತಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಸೀದಿಗಳ ಮುಂದೆ ಗಣಪತಿ ಮೆರವಣಿಗೆ ಮಾಡುವುದಕ್ಕೂ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಲಾಗುತ್ತದೆ.
ಆದರೆ, ಇದಕ್ಕೆ ತದ್ವಿರುದ್ಧವಾಗಿ ಉತ್ತರ ಕರ್ನಾಟಕದಲ್ಲಿ ಮಸೀದಿಯ ಒಳಗಡೆಯೇ ಹಿಂದೂಗಳ ಆರಾಧ್ಯ ದೈವ ಗಣೇಶ ಮೂರ್ತಿಯನ್ನು ಕೂರಿಸಿ, ವಿನಾಯಕ ಚತುರ್ಥಿಯನ್ನು ಅತ್ಯಂತ ಸೌಹಾರ್ದತೆಯಿಂದ ಆಚರಿಸಲಾಗಿದೆ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರಿಗೆ ಈ ಗ್ರಾಮಸ್ಥರು ನಿಜವಾದ 'ಧರ್ಮ ಸಾಮರಸ್ಯ'ದ ಪಾಠ ಕಲಿಸಿದ್ದಾರೆ.