ಸಾರ್ವಜನಿಕರ ಆಕ್ಷೇಪ ಮತ್ತು ಕ್ರಮ:
ಪೊಲೀಸರ ಮೇಲೆಯೇ ಹಲ್ಲೆ ನಡೆದರೂ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದು ಇಲಾಖೆಯ ಘನತೆಗೆ ಧಕ್ಕೆ ತಂದಿದೆ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಘಟನೆಯ ವಿಡಿಯೋಗಳು ಮತ್ತು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ದೀಪನ್ ಎಂ.ಎನ್., ಅಧಿಕಾರಿಯ ಕರ್ತವ್ಯ ಲೋಪವನ್ನು ಮನಗಂಡು ತಕ್ಷಣವೇ ಅಮಾನತು ಆದೇಶ ನೀಡಿದ್ದಾರೆ.