ವಿಜಯನಗರ: ಭರತ ಹುಣ್ಣಿಮೆಯಂದು ಕರ್ನಾಟಕದ ಉತ್ತರ ಭಾಗದ ಜಿಲ್ಲೆಗಳಲ್ಲಿ ಜಾತ್ರೆಗಳು ನಡೆಯುತ್ತವೆ. ಈ ಜಾತ್ರೆಗಳಲ್ಲಿ ನುಡಿಯುವ ಹೇಳಿಕೆ ಅಥವಾ ಕಾರ್ಣಿಕ ನುಡಿಗಳು ಮುಂದಿನ ವರ್ಷ ಹೇಗಿರಲಿವೆ ಎಂಬುದರ ಬಗ್ಗೆ ಭವಿಷ್ಯ ನುಡಿಯುತ್ತವೆ.
25
ಭವಿಷ್ಯವಾಣಿ
ಜಾತ್ರೆಗಳಂದು ನುಡಿಯುವ ಭವಿಷ್ಯವಾಣಿ ಕೇಳಲು ದೂರ ದೂರದ ಊರುಗಳಿಂದ ಜನರು ಆಗಮಿಸುತ್ತಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಮೈಲಾರದ ಗೊರವಯ್ಯ ನುಡಿಯುವ ಕಾರ್ಣಿಕ ಸಹ ಮಹತ್ವವನ್ನು ಪಡೆದುಕೊಂಡಿದೆ.
35
ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್
ಫೆಬ್ರವರಿ 1ರಂದು ಹರಪನಹಳ್ಳಿಯ ದೊಡ್ಡ ಮೈಲಾರದ ಜಾತ್ರೆ ನಡೆದಿತ್ತು. ಈ ಜಾತ್ರೆಯಂದು ಗೊರವಯ್ಯನ ಕಾರ್ಣಿಕ ನುಡಿದಿದ್ದಾರೆ. ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್ ಎಂದು ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ.
ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್ ಎಂದರೆ ರಾಜ್ಯದಲ್ಲಿ ಸಮೃದ್ಧಿ ಮತ್ತು ಸಂತೋಷ ಇರಲಿದೆ ಎಂಬುದರ ಸೂಚನೆ ಎಂದು ದೇವಸ್ಥಾನದ ಅರ್ಚಕರು ವಿಶ್ಲೇಷಣೆ ಮಾಡುತ್ತಾರೆ. ಒಳ್ಳೆಯ ಸುದ್ದಿಯ ಕಾರ್ಣಿಕ ಕೇಳಿ ಭಕ್ತಾದಿಗಳು ಸಂತೋಷಗೊಂಡಿದ್ದಾರೆ.