PHOTOS: ಗಣೇಶ ಭಕ್ತರ ಮೇಲೆ ಸಾವಿನಂತೆ ಎರಗಿದ ಕ್ಯಾಂಟರ್‌, ರಸ್ತೆಯಲ್ಲೇ ಹೆಣವಾದ 8 ಮಂದಿ!

Published : Sep 12, 2025, 10:26 PM IST

hassan truck crashes ganesha procession ಹಾಸನದ ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕ್ಯಾಂಟರ್‌ ನುಗ್ಗಿ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೈಕ್‌ ಸವಾರನನ್ನು ರಕ್ಷಿಸಲು ಹೋಗಿ ಚಾಲಕ ನಿಯಂತ್ರಣ ತಪ್ಪಿದ್ದೇ ದುರಂತಕ್ಕೆ ಕಾರಣ.

PREV
110

ಗಣೇಶ ಮೆರವಣಿಗೆ ಮೇಲೆ ಭಾರೀ ಕ್ಯಾಂಟರ್‌ ನುಗ್ಗಿದ ಪರಿಣಾಮದಿಂದಾಗಿ 5 ಮಂದಿ ಸ್ಥಳದಲ್ಲಿಯೇ ಸಾವು ಕಂಡಿದ್ದು, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.

210

ಹಾಸನ ತಾಲೂಕಿನ ಹೊಳೇನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೊಸಳೆ ಹೊಸಳ್ಳಿ ಬಳಿ ಈ ಘನಘೋರ ದುರಂತ ಸಂಭವಿಸಿದೆ.

310

ಒಂದೆಡೆ ಮೆರವಣಿಗೆ ಸಾಗುತ್ತಿದ್ದರೆ, ಎದುರಿಗೆ ಬಂದ ಬೈಕ್‌ ಸವಾರನ ರಕ್ಷಣೆ ಮಾಡಲು ಹೋದ ಕ್ಯಾಂಟರ್‌ ಚಾಲಕ ಭಾರೀ ವಾಹನವನ್ನು ಮೆರವಣಿಗೆ ಮೇಲೆ ಹರಿಸಿದ್ದಾನೆ. ಇದರಿಂದಾಗಿ ಘನಘೋರ ದುರಂತ ಸಂಭವಿಸಿದೆ.

410

ಘಟನೆಯಲ್ಲಿ ಮೂರು ಮಂದಿ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಡಿಸಿ ಹಾಗೂ ಎಸ್‌ಪಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಸ್ಥಳೀಯ ಗ್ರಾಮಸ್ಥರು ಕೂಡ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

510

ಆಸ್ಪತ್ರೆಗಳಿಗೆ ಸಾಲು ಸಾಲು ಆಂಬ್ಯುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಸಾಗಿಸಲಾಗಿದೆ. ಘಟನಾ ಸ್ಥಳದಲ್ಲಿ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಬದುಕುಳಿದವರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ.

610

ಘಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ಎಚ್‌ಡಿ ರೇವಣ್ಣ ಇಡೀ ಘಟನೆಗೆ ಸರ್ಕಾರವೇ ಕಾರಣ ಎಂದು ಹೇಳಿದರು. ರಸ್ತೆಯಲ್ಲಿ ಮೆರವಣಿಗೆ ಹೋಗುವಾಗ ಸಾಕಷ್ಟಯ ಭದ್ರತೆಯನ್ನು ನೀಡಲು ಪೊಲೀಸರು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

710

ಘಟನಾ ಸ್ಥಳದಲ್ಲಿ ಎಲ್ಲಿಯೂ ಪೊಲೀಸರೇ ಇದ್ದಿರಲಿಲ್ಲ. ಕೆಲ ಬ್ಯಾರಿಕೇಡ್‌ಗಳನ್ನು ಹಾಕಿದ್ದರೆ, ಈ ಅಪಾಯವನ್ನು ತಪ್ಪಿಸಬಹುದಿತ್ತು ಎಂದು ಎಚ್‌ಡಿ ರೇವಣ್ಣ ಹೇಳಿದ್ದಾರೆ.

810

ಶರವೇಗದಲ್ಲಿ ಇದ್ದ ಕ್ಯಾಂಟರ್‌ ಏಕಾಏಕಿಯಾಗಿ ಮೆರವಣಿಗೆ ಮೇಲೆ ನುಗ್ಗಿದ್ದೇ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣ ಎನ್ನಲಾಗಿದೆ. ಮೆರವಣಿಗೆ ಮೇಲೆ ಅಂದಾಜು 20 ಮೀಟರ್‌ವರೆಗ ಕ್ಯಾಂಟರ್‌ ಚಲಿಸಿದ್ದರಿಂದ ಭಾರೀ ಅವಘಢ ಎದುರಾಗಿದೆ.

910

ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ ಎಂದು ಎಚ್‌ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

1010

ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ ಎಂದು ಎಚ್‌ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

Read more Photos on
click me!

Recommended Stories