ಕೊಡಗು : ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಹಲವೆಡೆ ಭಾರೀ ಅವಘಡಗಳು ಎದುರಾಗುತ್ತಿವೆ. ಬಹುತೇಕ ಕಡೆಗಳಲ್ಲಿ ಮರಗಳು ಉರುಳಿ ಬೀಳುತ್ತಿದ್ದರೆ, ಮತ್ತೆ ಕೆಲವೆಡೆ ಮನೆಗಳು ಧರಾಶಾಹಿ ಆಗುತ್ತಿವೆ. ಆದರೆ ಇಲ್ಲಿ ಕೆರೆಯೇ ಹೊಡೆದು ಹೋಗುವ ಹಂತ ತಲುಪಿದ್ದು ಜನರಿಗೆ ಆತಂಕ ತಂದೊಡ್ಡಿದೆ. ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಕುಶಾಲನಗರ ತಾಲ್ಲೂಕಿನ ಗೊಂದಿಬಸವನಹಳ್ಳಿಯ ರೊಂಡೆಕೆರೆ ಒಡೆದು ಹೋಗುವ ಸ್ಥಿತಿ ತಲುಪಿದೆ. 15 ಮೀಟರ್ ನಷ್ಟು ಉದ್ದಕ್ಕೆ ಕೆರೆಯ ಏರಿ ಸಂಪೂರ್ಣ ಬಿರುಕು ಬಿಟ್ಟಿದ್ದು, ಏರಿಯ ಹಿಂಭಾಗಕ್ಕೆ ಹಂತ ಹಂತವಾಗಿ ಕುಸಿದು ಹೋಗುತ್ತಿದೆ.