ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರವಾದ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್, ಡಿವೈಡರ್ ಹಾರಿ ಪಕ್ಕದ ರಸ್ತೆಯಲ್ಲಿ ತೆರಳುತ್ತಿದ್ದ ಸಾರಿಗೆ ಬಸ್ಗೆ ಡಿಕ್ಕಿಯಾಗಿದೆ. ಬಸ್ ಮುಂಭಾಗ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.