ಆದರೂ, ರಾಜ್ಯದ ಜನರಿಗೆ ಅನ್ಯಾಯವಾದರೆ ಸುಮ್ಮನಿರಲ್ಲ, ಹೋರಾಡುತ್ತೇನೆ’ ಎನ್ನುತ್ತಾ ಮತ್ತೆ ಆತ್ಮಸ್ಥೈರ್ಯ ಹೆಚ್ಚಿಸಿಕೊಂಡವರಂತೆ ಏರುಧ್ವನಿಯಲ್ಲಿ ಮಾತನಾಡಿದರು. ಇಳಿವಯಸ್ಸಿನ ಅವರ ಈ ಉತ್ಸಾಹ ವೇದಿಕೆಯಲ್ಲಿದ್ದ ಇತರ ಮುಖಂಡರಿಗೆ ಹೊಸ ಚೈತನ್ಯ ನೀಡಿದರೆ, ವೇದಿಕೆ ಮುಂದಿದ್ದ ಕಾರ್ಯಕರ್ತರು ಶಿಳ್ಳೆ ಹೊಡೆಯುವಂತೆ ಮಾಡಿತು.