ಮಾರ್ಗ 1: ವಿಜಯಪುರದಿಂದ ಆರಂಭವಾಗುವ ಈ ಪ್ರಯಾಣ ಆಲಮಟ್ಟಿ, ಬಾಗಲಕೋಟೆ, ಬಾದಾಮಿ, ಹೊಳೆಆಲೂರು, ಗದಗ ಜಂಕ್ಷನ್, ಕೊಪ್ಪಳ, ಹೊಸಪೇಟೆ, ಬಳ್ಳಾರಿ, ಗುಂತಕಲ್ ಮಾರ್ಗವಾಗಿ ತಿರುಪತಿ ತಲುಪಬಹುದಾಗಿದೆ.
ಮಾರ್ಗ 2: ಒಂದು ವೇಳೆ ಕಲಬುರಗಿ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಗಳಿವೆ. ವಿಜಯಪುರದಿಂದ ವಾಯ ಹುಟುಗಿ ಜಂಕ್ಷನ್ನಿಂದ ಕಲಬುರಗಿ, ವಾಡಿ, ಯಾದಗಿರಿ, ರಾಯಚೂರು, ಮಂತ್ರಾಲಯ, ರಾಣಿಗುಂಟಾ ಜಂಕ್ಷನ್ ಮಾರ್ಗವಾಗಿ ತಿರುಪತಿ ತಲುಪಬಹುದಾಗಿದೆ. ಆದ್ರೆ ಭಾರತೀಯ ರೈಲ್ವೆ ಇಲಾಖೆ ಯಾವ ಮಾರ್ಗ ಮತ್ತು ಎಲ್ಲೆಲ್ಲಿ ನಿಲುಗಡೆಯನ್ನು ಹೊಂದಲಿದೆ ಎಂಬುದರ ಬಗ್ಗೆ ಅಧಿಕೃತವಾದ ಮಾಹಿತಿ ಹೊರ ಬಂದಿಲ್ಲ.
ಇದನ್ನೂ ಓದಿ: ಮುರಡೇಶ್ವರ-ಕಾಚಿಗುಡು ರೈಲು ಇನ್ಮುಂದೆ ಕುಮಟಾಗೆ ವಿಸ್ತರಣೆ- ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ