ಪ್ರಾಂಶುಪಾಲರ ಆತಂಕದ ಮಾತು:
ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾಲೇಜು ಪ್ರಾಂಶುಪಾಲ ದೇವನಗೌಡ ಅವರು, 'ಕಟ್ಟಡವು ತುಂಬಾ ಹಳೆಯದೇನಲ್ಲ, ಆದರೆ ಮೇಲ್ಛಾವಣಿಯ ಮೇಲೆ ಮಳೆ ನೀರು ನಿಲ್ಲುತ್ತಿರುವುದರಿಂದ ಈ ಸಮಸ್ಯೆ ಉಂಟಾಗಿದೆ. ಇಡೀ ಕಟ್ಟಡದ ಸ್ಥಿತಿ ಸದ್ಯ ಹೀಗೆಯೇ ಇದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪ್ರತಿದಿನ ಭಯದಲ್ಲೇ ಕಾಲ ಕಳೆಯುವಂತಾಗಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಕೂಡಲೇ ದುರಸ್ತಿಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇವೆ,' ಎಂದು ತಿಳಿಸಿದ್ದಾರೆ.