ಕವಿವಿ ಆವರಣದಲ್ಲಿ ಹೈಡ್ರಾಮಾ:
ಪ್ರೊಫೆಸರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ವಿವಿ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನಾಕಾರರು ಕುಲಪತಿಗಳ ಭವನದತ್ತ ನುಗ್ಗಲು ಯತ್ನಿಸಿದಾಗ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆಯಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ತೀವ್ರ ತಳ್ಳಾಟ-ನೂಕಾಟ ನಡೆಯಿತು. ಆಕ್ರೋಶಗೊಂಡ ವಿದ್ಯಾರ್ಥಿಗಳು ಬ್ಯಾರಿಕೇಡ್ಗಳನ್ನು ಹಾರಿ ಕುಲಪತಿಗಳ ಆಡಳಿತ ಕಚೇರಿ ಎದುರು ಜಮಾಯಿಸಿದರು. ಕಚೇರಿ ಮುಂಭಾಗದಲ್ಲಿದ್ದ ಹೂವಿನ ಕುಂಡಗಳನ್ನು ಒಡೆದು ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.