ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಸುರಿದ ನಿರಂತರ ಮತ್ತು ಭಾರಿ ಮಳೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಜಮಖಂಡಿ ಮತ್ತು ಮುಧೋಳ ನಡುವಿನ ಮುಖ್ಯ ರಸ್ತೆ ಸಂಪೂರ್ಣವಾಗಿ ಮಳೆ ನೀರಿನಿಂದ ಆವೃತಗೊಂಡಿದ್ದು, ರಸ್ತೆಯುದ್ದಕ್ಕೂ ನೀರು ನದಿಯಂತೆ ಹರಿಯುತ್ತಿದೆ. ರಸ್ತೆಯಲ್ಲಿ ನೀರು ನಿಂತ ಪರಿಣಾಮ ಶಾಲಾ ವಾಹನಗಳು ಸೇರಿದಂತೆ ಹಲವು ವಾಹನಗಳು ಕೆಟ್ಟು ನಿಂತಿವೆ. ಬೈಕ್ ಮತ್ತು ಆಟೋ ರಿಕ್ಷಾ ಸವಾರರು ರಸ್ತೆಯಲ್ಲಿ ಸಂಚರಿಸಲು ತೀವ್ರವಾಗಿ ಪರದಾಡುತ್ತಿದ್ದಾರೆ.