ಕೊಪ್ಪಳದ ರೈತರೊಬ್ಬರು ವಿಶ್ವದ ಅತ್ಯಂತ ದುಬಾರಿ ಮಿಯಾ ಜಾಕಿ ಮಾವನ್ನು ಬೆಳೆದಿದ್ದಾರೆ. ಆದರೆ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಈ ಮಾವಿಗೆ ಸ್ಥಳೀಯವಾಗಿ ಕೇವಲ 3 ಸಾವಿರ ರೂಪಾಯಿ ಬೆಲೆ ಸಿಕ್ಕಿದ್ದು, ಮಾರುಕಟ್ಟೆಯ ಸವಾಲು ಎದುರಿಸುತ್ತಿದ್ದಾರೆ.
ವಿಶ್ವದ ದುಬಾರಿ ಮಾವಿಗೆ ಕರ್ನಾಟಕದಲ್ಲಿ ಕೇವಲ 3 ಸಾವಿರ ರೂ!
ಜಗತ್ತಿನ ದುಬಾರಿ ಮಾವು ಎಂದೇ ಪ್ರಸಿದ್ಧಿಯಾಗಿರುವ ಜಪಾನ್ ಮೂಲದ ಮಿಯಾ ಜಾಕಿ ಮಾವು ಕೊಪ್ಪಳದ ರೈತನೋರ್ವ ಬೆಳೆದಿದ್ದು, ಅದು ಈಗ ಬಂಪರ್ ಬೆಳೆ ಬಂದಿದೆ. ಆದರೆ ವಿಶ್ವದ ದುಬಾರಿ ಮಾವಿಗೆ ಈಗ ದರದ ಸಮಸ್ಯೆ ಎದುರಾಗಿದೆ. 2.50 ಲಕ್ಷ ಇದ್ದ ಮೀಯಾ ಜಾಕಿ ಕೊಪ್ಪಳದ ಮಾವು ಮೇಳದಲ್ಲಿ ಪ್ರತಿ ಕೆಜಿಗೆ ಕೇವಲ 3 ಸಾವಿರ ರೂಪಾಯಿ ಮಾರಾಟವಾಗಿದೆ.
25
2 ಎಕರೆ ಪ್ರದೇಶದಲ್ಲಿ ಮಿಯಾ ಜಾಕಿ ಬೆಳೆದ ರೈತ
ಈ ಹಿಂದೆ ಕೊಪ್ಪಳ ತೋಟಗಾರಿಕಾ ಇಲಾಖೆ ಹಣ್ಣು ಮಾರಾಟ ಮೇಳದಲ್ಲಿ ಮೂರು ವರ್ಷಗಳ ಹಿಂದೆ ಪ್ರದರ್ಶನಕ್ಕೆ ಇಟ್ಟಿದ್ದ ಮಿಯಾಜಾಕಿ ಮಾವು ನೋಡಿ ಅದರಿಂದ ಪ್ರೇರಣೆಗೊಂಡ ರೈತ ನಾಗಪ್ಪ ಬಗನಾಳ ತಾಲೂಕಿನ ಕಲ್ ತಾವರಗೇರಾ ಗ್ರಾಮದಲ್ಲಿರುವ ತಮ್ಮ 2 ಎಕರೆ ಪ್ರದೇಶದಲ್ಲಿ ಮಿಯಾ ಜಾಕಿ ಬೆಳೆದಿದ್ದರು. ಆದರೆ ಸದ್ಯ ನಾಗಪ್ಪ ಬೆಳೆದ ಮಿಯಾ ಜಾಕಿ ಮಾವಿನ ಹಣ್ಣಿಗೆ ಉತ್ತಮ ಬೆಲೆ ಸಿಕ್ಕಿಲ್ಲ. ಕೆಜಿ ಗೆ 2.50 ಲಕ್ಷ ಮೌಲ್ಯದ ಮಾವು ಈಗ ಬರೇ 3 ಸಾವಿರ ರೂಗೆ ಮಾರಾಟವಾಗಿದೆ. ಹೀಗಾಗಿ ಮಿಯಾ ಜಾಕಿಗೆ ಉತ್ತಮ ಬೆಲೆ ಕೊಡಿಸುವಂತೆ ರೈತ ನಾಗಪ್ಪ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
35
ಪ್ರತಿ ಸಸಿಗೆ ₹1300 ಕೊಟ್ಟು ಖರೀದಿ ಮಾಡಿದ ರೈತ
ಮೂರು ವರ್ಷಗಳ ಹಿಂದೆ ದೆಹಲಿಯಿಂದ ರೈಲು ಮೂಲಕ 200 ಮಿಯಾಜಾಕಿ ಮಾವು ಸಸಿಯನ್ನು ನಾಗಪ್ಪ ಬಗನಾಳ ತರಿಸಿದ್ದರು. ಪ್ರತಿ ಸಸಿಗೆ ₹1300 ಕೊಟ್ಟಿದ್ದಾರೆ. ನಾಟಿ ಮಾಡಿದ ಬಳಿಕ 20 ಸಸಿಗಳು ಸತ್ತಿವೆ. 180 ಮಿಯಾಜಾಕಿ ಮಾವಿನ ಗಿಡಗಳು ಭರ್ಜರಿಯಾಗಿ ಬೆಳೆದು ನಿಂತು, ಈ ಪೈಕಿ ಈ ವರ್ಷ ಒಂದಷ್ಟು ಗಿಡಗಳು ನಿರೀಕ್ಷೆಗೂ ಮೀರಿ ಫಸಲು ನೀಡಿವೆ.
ಪ್ರತ್ಯೇಕ ಉಪಚಾರವೇನೂ ಇಲ್ಲದೆ ಎಲ್ಲಾ ಮಾವು ಬೆಳೆದಂತೆ ಬೆಳೆದ ಮಿಯಾಜಾಕಿ ಮಾವಿಗೆ ಮಾರುಕಟ್ಟೆಯದ್ದೆ ದೊಡ್ಡ ಸವಾಲು ಆಗಿದೆ. ಈ ವರ್ಷವಷ್ಟೇ ಬೆಳೆದಿರುವ ಮಿಯಾಜಾಕಿ ಮಾವಿಗೆ ಸ್ಥಳೀಯವಾಗಿ ಮಾರುಕಟ್ಟೆ ಇಲ್ಲ. ಹೀಗಾಗಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೇ ಇದನ್ನು ಮಾರಾಟ ಮಾಡಬೇಕಾಗಿದೆ. ರಫ್ತು ಮಾಡುವುದು ಕೂಡ ಸವಾಲಿನ ಕೆಲಸವಾಗಿದೆ.
55
ಏನಿದು ಮಿಯಾ ಜಾಕಿ ಮಾವು?
ಜಪಾನ್ ದೇಶದ ಕ್ಯುಶು ಪ್ರಾಂತದ ಮಿಯಾಜಾಕಿ ನಗರದಲ್ಲಿ ಇದನ್ನು ಹೆಚ್ಚಾಗಿ ಬೆಳೆಯುವುದರಿಂದ ಇದಕ್ಕೆ ಮಿಯಾ ಜಾಕಿ ಮಾವು ಎಂದು ಹೆಸರು ಬಂದಿದೆ. ಸಾಮಾನ್ಯವಾಗಿ ಜಪಾನ್ ಸುತ್ತಮುತ್ತಲ ಪ್ರದೇಶದಲ್ಲಿಯೇ ಬೆಳೆಯುವ ಈ ಮಾವು ಜಗತ್ತಿನ ದುಬಾರಿ ಮಾವು ಎಂದೇ ಪ್ರಸಿದ್ಧಿಯಾಗಿದೆ. ಪ್ರತಿ ಕೆಜಿಗೆ ₹2.5 ಲಕ್ಷದಿಂದ ₹3 ಲಕ್ಷಕ್ಕೆ ಇದು ಮಾರಾಟವಾಗುತ್ತದೆ. ದುಬಾರಿ ಮಾವು ಎನ್ನುವ ಕಾರಣಕ್ಕಾಗಿ ಕಷ್ಟಪಟ್ಟು ಬೆಳೆದಿದ್ದೇವೆ. ನಿರೀಕ್ಷೆಗೂ ಮೀರಿ ಉತ್ತಮ ಫಸಲು ಬಂದಿದೆ. ಈಗ ಅದನ್ನು ಮಾರಾಟ ಮಾಡುವುದೇ ದೊಡ್ಡ ಸವಾಲು ಎಂದು ರೈತ ನಾಗಪ್ಪ ಬಗನಾಳ ತಿಳಿಸಿದ್ದಾರೆ.