ಸ್ಥಗಿತಗೊಂಡ ಸೇವೆ, ತೊಂದರೆಗೆ ಸಿಲುಕಿದ ಜನ:
ಶಿವಮೊಗ್ಗ ವಿಮಾನ ನಿಲ್ದಾಣವು 2023ರ ಫೆಬ್ರವರಿಯಲ್ಲಿ ಕಾರ್ಯಾರಂಭ ಮಾಡಿತು. ಆರಂಭದಲ್ಲಿ ಇಂಡಿಗೋ ಸಂಸ್ಥೆಯು ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ, ಕೆಲ ತಿಂಗಳಿನಿಂದ ಈ ಸೇವೆಯು ಸ್ಥಗಿತಗೊಂಡಿದ್ದು, ಇದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ತೀವ್ರ ತೊಂದರೆಯಾಗಿದೆ. ಈ ಜಿಲ್ಲೆಗಳ ಆರ್ಥಿಕ, ಕೃಷಿ, ಪ್ರವಾಸೋದ್ಯಮ ಮತ್ತು ಕೈಗಾರಿಕಾ ಬೆಳವಣಿಗೆಗೆ ವಿಮಾನ ಸೇವೆ ಅತ್ಯಂತ ನಿರ್ಣಾಯಕವಾಗಿತ್ತು. ಇದರ ಸ್ಥಗಿತದಿಂದ ಈ ಎಲ್ಲಾ ಕ್ಷೇತ್ರಗಳಿಗೂ ತೀವ್ರ ಹಿನ್ನಡೆಯಾಗಿದೆ ಎಂದು ಸಚಿವರು ಪತ್ರದಲ್ಲಿ ವಿವರಿಸಿದ್ದಾರೆ.