ಮಡಿಕೇರಿಗೆ ರಾಷ್ಟ್ರಪತಿ ಭೇಟಿ: ಅಂಗಡಿ ಬಂದ್‌ ಮಾಡುವಂತೆ ಸೂಚಿಸಿದ್ದಕ್ಕೆ ಭುಗಿಲೆದ್ದ ಆಕ್ರೋಶ

First Published Feb 3, 2021, 4:49 PM IST

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಫೆಬ್ರವರಿ 6ರಂದು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಹಲವು ಅಂಗಡಿಗಳನ್ನು ಒಂದು ದಿನ ಬಂದ್ ಮಾಡಲು ಸೂಚನೆ ಕೊಡಲಾಗಿದೆ. ಇದು ಆಕ್ರೋಶಕ್ಕೆ ಕಾರಣವಾಗಿದೆ.  ಜಿಲ್ಲಾಡಳಿತದ ನಡೆಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಫೆಬ್ರವರಿ 6ರಂದು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.
undefined
ಮಡಿಕೇರಿಯ ಜನರಲ್ ಕೆ. ಎಸ್. ತಿಮ್ಮಯ್ಯ ಸ್ಮಾರಕ ಭವನ ಉದ್ಘಾಟನೆ ಹಾಗೂ ತಲಕಾವೇರಿಗೆ ರಾಷ್ಟ್ರಪತಿಗಳು ಭೇಟಿ ನೀಡಲಿದ್ದಾರೆ.
undefined
ಈ ಹಿನ್ನೆಲೆಯಲ್ಲಿ ಮಡಿಕೇರಿ ಕಾರ್ಯಪ್ಪ ಕಾಲೇಜ್‌ನಿಂದ ಎಲ್.ಐ.ಸಿ, ರಾಜಾ ಸೀಟ್, ತಿಮ್ಮಯ್ಯ ವೃತ್ತ, ಈಸ್ಟ್ ಎಂಡ್, ಸರ್ಕಾರಿ ಬಸ್ ಡಿಪೋ, ಕಾರ್ಯಪ್ಪ ಸರ್ಕಲ್ ಮಾರ್ಗದ ರಸ್ತೆ ಬದಿಯ ಎಲ್ಲಾ ಅಂಗಡಿಗಳನ್ನು ಶನಿವಾರ ಮುಚ್ಚಲು ನಗರಸಭೆ ಸೂಚನೆ ನೀಡಿದೆ.
undefined
ಇದರಿಂದ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
undefined
ಬರುತ್ತಿರುವುದು ರಾಷ್ಟ್ರಪತಿಗಳಾ ಅಥವಾ........ ಬೇರೆಯವರಾ ಎಂದು ಪ್ರಶ್ನಿಸಿಸುತ್ತಿದ್ದಾರೆ.
undefined
ರಾಷ್ಟ್ರಪತಿಗಳು ಆಗಮಿಸುತ್ತಿರುವುದಕ್ಕೆ ಅಂಗಡಿಗಳನ್ನು ಬಂದ್ ಮಾಡಿಸುತ್ತಿರುವುದ್ಯಾಕೆ ಎಂದು ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರುತ್ತಿದ್ದಾರೆ.
undefined
ಕೊಡಗು ಜಿಲ್ಲಾಡಳಿ ನಡೆಗೆ ಆಕ್ರೋಶದ ಮಾತುಗಳು
undefined
click me!