ಕೊಪ್ಪಳದಲ್ಲೂ 'ಲವ್ ಜಿಹಾದ್': ಮುಸ್ತಫಾ ಮೊಬೈಲ್‌ನಲ್ಲಿ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಪತ್ತೆ! ಎಸ್‌ಪಿಗೆ ದೂರು

Published : Apr 11, 2026, 02:33 PM IST

ಕೊಪ್ಪಳದಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯೊಂದಿಗೆ ಓಡಾಡುತ್ತಿದ್ದ ಮುಸ್ಲಿಂ ಯುವಕನನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯ ಮೊಬೈಲ್‌ನಲ್ಲಿ ಹಲವು ಹಿಂದೂ ಯುವತಿಯರ ಆಕ್ಷೇಪಾರ್ಹ ವಿಡಿಯೋಗಳು ಪತ್ತೆಯಾಗಿದ್ದು, ವ್ಯವಸ್ಥಿತ ಲವ್ ಜಿಹಾದ್ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

PREV
17
ಹಿಂದೂ ಯುವತಿಯರ ಆಕ್ಷೇಪಾರ್ಹ ವಿಡಿಯೋ

ಕೊಪ್ಪಳ: ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣವೊಂದು ಭಾರಿ ಸಂಚಲನ ಮೂಡಿಸಿದೆ. ನರ್ಸಿಂಗ್ ಓದುತ್ತಿದ್ದ ಹಿಂದೂ ವಿದ್ಯಾರ್ಥಿನಿಯನ್ನು ಪುಸಲಾಯಿಸಿದ ಆರೋಪದ ಮೇಲೆ ಮುಸ್ಲಿಂ ಯುವಕನೋರ್ವನನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ಆರೋಪಿತ ಯುವಕನ ಮೊಬೈಲ್‌ನಲ್ಲಿ ಹಲವು ಹಿಂದೂ ಯುವತಿಯರ ಆಕ್ಷೇಪಾರ್ಹ ವಿಡಿಯೋಗಳು ಪತ್ತೆಯಾಗಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.

27
ಘಟನೆಯ ಹಿನ್ನೆಲೆ:

ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ಮುಸ್ತಫಾ ಎಂಬ ಯುವಕ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಕುಷ್ಟಗಿ ತಾಲೂಕಿನ ಗ್ರಾಮವೊಂದರ ಹಿಂದೂ ವಿದ್ಯಾರ್ಥಿನಿ ಕೊಪ್ಪಳದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ಜೊತೆ ಮುಸ್ತಫಾ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಇತ್ತೀಚೆಗೆ ಕೊಪ್ಪಳ ನಗರದಲ್ಲಿ ಇವರಿಬ್ಬರೂ ಜೊತೆಯಾಗಿ ಓಡಾಡುತ್ತಿದ್ದ ವೇಳೆ ಸ್ಥಳೀಯ ಹಿಂದೂ ಯುವಕರ ಕಣ್ಣಿಗೆ ಬಿದ್ದಿದ್ದಾರೆ. ಅನುಮಾನಗೊಂಡ ಯುವಕರು ಮುಸ್ತಫಾನನ್ನು ತಡೆದು ವಿಚಾರಣೆ ನಡೆಸಿದ್ದಾರೆ.

37
ಮೊಬೈಲ್‌ನಲ್ಲಿ ಪತ್ತೆಯಾದ ಅಶ್ಲೀಲ ವಿಡಿಯೋಗಳು:

ಹಿಂದೂ ಯುವಕರು ಮುಸ್ತಫಾನ ಮೊಬೈಲ್ ಫೋನ್ ಅನ್ನು ಪರಿಶೀಲಿಸಿದಾಗ ಬೆಚ್ಚಿಬೀಳಿಸುವ ಸತ್ಯಾಂಶಗಳು ಹೊರಬಂದಿವೆ ಎನ್ನಲಾಗಿದೆ. ಮುಸ್ತಫಾನ ಮೊಬೈಲ್‌ನಲ್ಲಿ ಕೇವಲ ಈ ವಿದ್ಯಾರ್ಥಿನಿ ಮಾತ್ರವಲ್ಲದೆ, ಜಿಲ್ಲೆಯ ಹಲವಾರು ಹಿಂದೂ ಯುವತಿಯರ ಫೋಟೋಗಳು ಮತ್ತು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎಂದು ಆರೋಪಿಸಲಾಗಿದೆ. 

ಅಲ್ಲದೆ, ಈತ ‘ಮಟ್ಕಾ’ ಎಂಬ ಅಕ್ರಮ ಜೂಜಾಟದ ದಂಧೆಯಲ್ಲೂ ತೊಡಗಿಸಿಕೊಂಡಿರುವುದು ತಿಳಿದುಬಂದಿದೆ. ವಿಚಾರಣೆ ನಡೆಯುತ್ತಿದ್ದಂತೆಯೇ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮುಸ್ತಫಾ ತನ್ನ ಮೊಬೈಲ್ ಅನ್ನು ‘ಫ್ಯಾಕ್ಟರಿ ರಿಸೆಟ್’ (Reset) ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

47
ಪೊಲೀಸ್ ಠಾಣೆ ಎದುರು ಹೈಡ್ರಾಮಾ

ಯುವಕನ ಕೃತ್ಯದಿಂದ ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರು ಆತನನ್ನು ಹಿಡಿದು ನಗರ ಪೊಲೀಸ್ ಠಾಣೆಗೆ ಕರೆತಂದರು. ಈ ವೇಳೆ ಠಾಣೆಯ ಮುಂದೆ ನೂರಾರು ಹಿಂದೂ ಯುವಕರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರ ವಿಚಾರಣೆ ವೇಳೆ ಮುಸ್ತಫಾ, ‘ನಾನು ಆ ಹುಡುಗಿಯನ್ನು ಪ್ರೀತಿಸುತ್ತಿದ್ದೇನೆ ಮತ್ತು ಈಗಾಗಲೇ ಮದುವೆಯಾಗಿದ್ದೇನೆ’ ಎಂದು ಹೇಳಿಕೆ ನೀಡಿದ್ದಾನೆ. ಆದರೆ, ಇದು ವ್ಯವಸ್ಥಿತ ಲವ್ ಜಿಹಾದ್ ಕೃತ್ಯ ಎಂದು ಹಿಂದೂ ಸಂಘಟನೆಗಳು ಗಂಭೀರವಾಗಿ ಪರಿಗಣಿಸಿವೆ.

57
ಎಸ್ಪಿಗೆ ದೂರು ನೀಡಿದ ವಿಹೆಚ್‌ಪಿ:

ಪ್ರಕರಣದ ಗಂಭೀರತೆಯನ್ನು ಅರಿತು ವಿಶ್ವ ಹಿಂದೂ ಪರಿಷತ್ (VHP) ಜಿಲ್ಲಾಧ್ಯಕ್ಷರಾದ ಡಾ. ಸಂಗಮೇಶ ಹಿರೇಮಠ್ ಅವರ ನೇತೃತ್ವದಲ್ಲಿ ಹಿಂದೂ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ರಾಮ್ ಎಲ್. ಅರಸಿದ್ದಿ ಅವರನ್ನು ಭೇಟಿಯಾದರು. ಮುಸ್ತಫಾ ಬಳಸುತ್ತಿದ್ದ ಎರಡು ಮೊಬೈಲ್ ಫೋನ್ ಇನ್ನುಳಿದ ದಾಖಲೆಗಳನ್ನು ಎಸ್‌ಪಿ ಅವರಿಗೆ ಹಸ್ತಾಂತರಿಸಿದ ಮುಖಂಡರು, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದರು.

67
ಹಿಂದೂ ಯುವತಿಯರ ಟಾರ್ಗೆಟ್

‘ಇದು ಕೇವಲ ವೈಯಕ್ತಿಕ ಪ್ರೇಮ ಪ್ರಕರಣವಲ್ಲ, ಇದೊಂದು ದೊಡ್ಡ ಜಾಲವಾಗಿರುವ ಶಂಕೆ ಇದೆ. ಮುಸ್ತಫಾ ಹಲವು ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಬ್ಲ್ಯಾಕ್‌ಮೇಲ್ ಮಾಡಿರುವ ಸಾಧ್ಯತೆ ಇದೆ. ಆತನ ಮೊಬೈಲ್‌ನಿಂದ ಡಿಲೀಟ್ ಆಗಿರುವ ಡೇಟಾವನ್ನು ರಿಕವರಿ ಮಾಡಬೇಕು ಮತ್ತು ಆತನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು’ ಎಂದು ಡಾ. ಸಂಗಮೇಶ ಹಿರೇಮಠ್ ಆಗ್ರಹಿಸಿದ್ದಾರೆ.

77
ಕೊಪ್ಪಳದಲ್ಲಿ ಬಿಗುವಿನ ವಾತಾವರಣ

ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಮುಸ್ತಫಾನನ್ನು ವಶಕ್ಕೆ ಪಡೆದು ತನಿಖೆ ಚುರುಕುಗೊಳಿಸಿದ್ದಾರೆ. ಘಟನೆಯಿಂದಾಗಿ ಕೊಪ್ಪಳ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸದಂತೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Read more Photos on
click me!

Recommended Stories