ಶ್ರೀಗಳ ಮಾನವೀಯ ಸ್ಪಂದನೆ:
ವಿದೇಶದಲ್ಲಿ ನಿಧನರಾದ ಬಿಂದು ಅವರ ಪಾರ್ಥಿವ ಶರೀರವನ್ನು ಮರಳಿ ತಾಯ್ನಾಡಿಗೆ ತರುವುದು ಕುಟುಂಬಸ್ಥರಿಗೆ ದೊಡ್ಡ ಸವಾಲಾಗಿತ್ತು. ಈ ಸಂಕಷ್ಟದ ಸಮಯದಲ್ಲಿ ಸಿರಿಗೆರೆಯ ತರಳಬಾಳು ಮಠದ ಶ್ರೀಗಳು ಸಹಾಯ ಹಸ್ತ ಚಾಚಿದ್ದಾರೆ. ಶ್ರೀಗಳು ಕೂಡಲೇ ವಿದೇಶಿ ರಾಯಭಾರಿ ಕಚೇರಿಗಳು ಮತ್ತು ಕೇಂದ್ರ ವಿದೇಶಾಂಗ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಕಾನೂನು ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರೈಸಲು ನೆರವಾಗಿದ್ದಾರೆ.