ಪ್ರಸ್ತುತ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಕಡಿಮೆ ಇರುವುದರಿಂದ, ಬ್ಯಾರೇಜ್ ಗೇಟ್ ಮುರಿದಿದ್ದರೂ ಸಾರ್ವಜನಿಕರಿಗೆ ಯಾವುದೇ ಅಪಾಯವಿಲ್ಲ. ಒಂದು ವೇಳೆ ಮಳೆಗಾಲದಲ್ಲಿ ಈ ಘಟನೆ ನಡೆದಿದ್ದರೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಸಂಣವಿಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೂ ನದಿ ಪಾತ್ರದ ಜನರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ. ನೀರಿನ ಪೋಲನ್ನು ತಡೆಯಲು ಜಿಲ್ಲಾಡಳಿತ ಮತ್ತು ನೀರಾವರಿ ಇಲಾಖೆಯ ಎಂಜಿನಿಯರ್ಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ.