ಕರ್ನಾಟಕದಲ್ಲಿ ಬರಗಾಲವಿದ್ದರೂ, ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಕೃಷ್ಣಾ ನದಿಗೆ ಹರಿದು ಬಂತು 60 ಸಾವಿರ ಕ್ಯೂಸೆಕ್ ನೀರು!

Published : Jul 21, 2026, 01:08 PM IST

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ, ದೂದಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಚಿಕ್ಕೋಡಿ ತಾಲೂಕಿನ ನಾಲ್ಕು ಪ್ರಮುಖ ಕೆಳಹಂತದ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

PREV
15

ಬೆಳಗಾವಿ/ಚಿಕ್ಕೋಡಿ (ಜು.21): ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ (Western Ghats) ಮಳೆಯ ಆರ್ಭಟ ಮುಂದುವರಿದಿದ್ದು, ಇದರ ಪರಿಣಾಮವಾಗಿ ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಗೆ ಅಪಾರ ಪ್ರಮಾಣದ ನೀರು (Inflow) ಹರಿದು ಬರುತ್ತಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ತಾಲೂಕಿನ ಕೃಷ್ಣಾ, ದೂದಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟ ಅಪಾಯದ ಮಟ್ಟ ಮೀರಿ ಏರಿಕೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

25

ನದಿಗಳಿಗೆ ಹರಿದು ಬರುತ್ತಿದೆ ಭಾರೀ ನೀರು:

ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಕೃಷ್ಣಾ ನದಿಗೆ (Krishna River) ಒಟ್ಟು 60,000 ಕ್ಯೂಸೆಕ್ (Cusecs) ಒಳಹರಿವು ದಾಖಲಾಗಿದೆ. ನದಿಗಳ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿರುವುದರಿಂದ ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.

35

ನಾಲ್ಕು ಸೇತುವೆಗಳು ಜಲಾವೃತ್ತ:

ನೀರಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ನಾಲ್ಕು ಕೆಳ ಹಂತದ ಸೇತುವೆಗಳು (Low-level bridges) ಈಗಾಗಲೇ ಸಂಪೂರ್ಣವಾಗಿ ಜಲಾವೃತ್ತಗೊಂಡಿವೆ (Submerged).

ದೂದಗಂಗಾ ನದಿ: 

  1. ಕಾರದಗಾ-ಭೋಜ (Karadga-Bhoj), 
  2. ಭೋಜವಾಡಿ-ಕುಣ್ಣೂರ (Bhojwadi-Kunnur) ಮತ್ತು 
  3. ಬಾರವಾಡ-ಕುಣ್ಣೂರು (Barwad-Kunnur) ಸೇತುವೆಗಳು ಮುಳುಗಡೆಯಾಗಿವೆ.

ಕೃಷ್ಣಾ ನದಿ: 

ಇಲ್ಲಿನ ಕಲ್ಲೋಳ-ಯಡೂರ (Kallol-Yadur) ಸೇತುವೆಯೂ ನೀರಿನ ಅಡಿಯಲ್ಲಿ ಸಿಲುಕಿದೆ.

45

ಸಂಚಾರ ವ್ಯತ್ಯಯ ಮತ್ತು ಪರ್ಯಾಯ ಮಾರ್ಗ:

ಸೇತುವೆಗಳು ಮುಳುಗಡೆಯಾಗಿರುವುದರಿಂದ ಈ ಭಾಗದ ಗ್ರಾಮಗಳ ನಡುವಿನ ನೇರ ಸಂಪರ್ಕ ಕಡಿತಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಮತ್ತು ಅಧಿಕಾರಿಗಳು ಈ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದಾರೆ. ವಾಹನ ಸವಾರರು ಮತ್ತು ಶಾಲಾ ಮಕ್ಕಳು ಹಲವು ಕಿಲೋಮೀಟರ್ ಸುತ್ತು ಬಳಸಿ ಪರ್ಯಾಯ ಮಾರ್ಗಗಳ (Alternative Routes) ಮೂಲಕ ಸಂಚರಿಸುತ್ತಿದ್ದಾರೆ.

55

ಮುಂದಿನ ಕೆಲವು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ, ನದಿ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ಸೂಚನೆ ನೀಡಿದೆ.

Read more Photos on
click me!

Recommended Stories