ಚಾಮರಾಜನಗರ: ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ್ದವ ಅರೆಸ್ಟ್

Published : Jun 17, 2026, 12:02 PM IST

ಚಾಮರಾಜನಗರ ಜಿಲ್ಲೆಯ ಮಸಣಾಪುರ ಗ್ರಾಮದಲ್ಲಿ ನಡೆದ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಅಂಬೇಡ್ಕರ್‌ರ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ ಆರೋಪ ಹಿನ್ನೆಲೆ ಓರ್ವ ವ್ಯಕ್ತಿಯನ್ನ ಬಂಧಿಸಿದ ಪಲೀಸರು ವಿಚಾರಣೆಗೊಳಪಡಿಸಿದ್ದಾರೆ.

PREV
13
ಅಂಬೇಡ್ಕರ್ ಕುರಿತು ಅವಹೇಳನಕಾರಿ ಕಾಮೆಂಟ್

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಸಣಾಪುರ(Masanapur)ದಲ್ಲಿ ನಡೆದ ಅಂಬೇಡ್ಕರ್ ಭಾವಚಿತ್ರ ಅಪಮಾನ ಪ್ರಕರಣ(Ambedkar portrait insult case)ಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ(Social media)ದಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲೂಕಿನ ಮುಡಿಗುಂಡಂ ಗ್ರಾಮದ ಮಂಜುನಾಥ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

23
ಮಸಣಾಪುರದಲ್ಲಿ ಅಂಬೇಡ್ಕರ್‌ಗೆ ಅವಮಾನ

ಮಸಣಾಪುರದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ್ದ ಘಟನೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಆದರೆ ಈ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದ ಮಂಜುನಾಥ್, ಸಮಾಜದಲ್ಲಿ ಅಶಾಂತಿ ಹಾಗೂ ಜಾತಿ ದ್ವೇಷ ಉಂಟು ಮಾಡುವ ರೀತಿಯ ಕಾಮೆಂಟ್ ಮಾಡಿದ್ದ ಎಂದು ಆರೋಪಿಸಲಾಗಿದೆ.

‘ಇನ್ನು ಮುಂದೇನು ಅಂಬೇಡ್ಕರ್‌ಗೆ ಚಪ್ಪಲಿ ಹಾಕ ಹಾಕ್ತೇವೆ. ಇದು ನಮ್ಮ ಶಪಥ ಜೈ ಬಸವ ಸೇನೆ’ ಎಂದು ಕಾಮೆಟ್ ಮಾಡಿದ್ದ ಆರೋಪಿ.

33
ಅಂಬೇಡ್ಕರ್‌ಗೆ ಅವಮಾನ ವ್ಯಕ್ತಿ ಬಂದನ, ವಿಚಾರಣೆ

ಆರೋಪಿ ಮಾಡಿದ್ದ ಕಾಮೆಂಟ್ ಎರಡು ಸಮುದಾಯಗಳ ನಡುವೆ ಉದ್ವಿಗ್ನತೆ ಸೃಷ್ಟಿಸಲು ಯತ್ನ, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಉದ್ದೇಶದಿಂದಲೇ ಈ ರೀತಿಯ ಸಂದೇಶ ಹಾಕಲಾಗಿರುವ ಹಿನ್ನೆಲೆ ಕೊಳ್ಳೇಗಾಲ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಮಂಜುನಾಥರನ್ನ ವಶಕ್ಕೆ ಪಡೆದ ಪೊಲೀಸರು, ವಿಚಾರಣೆ ಒಳಪಡಿಸಿ ತನಿಖೆ ಮುಂದುವರಿಸಿದ್ದಾರೆ.

Read more Photos on
click me!

Recommended Stories