ಇದೀಗ ಲೋಕೋಪಯೋಗಿ ಇಲಾಖೆ ಸಂವಿಧಾನ ಭವನದ ತ್ರೀ-ಡಿ ಚಿತ್ರವನ್ನು ಅಂತಿಮಗೊಳಿಸಿದೆ. ಸರ್ಕಾರವೂ ಅದನ್ನು ಒಪ್ಪಿರುವುದರಿಂದ ಕಾಮಗಾರಿ ಶೀಘ್ರವೇ ಪ್ರಾರಂಭವಾಗಬಹುದೆಂಬ ನಿರೀಕ್ಷೆ ಮೂಡಿದೆ.ಸಂವಿಧಾನ ಭವನಕ್ಕೆ ೩ ಕೋಟಿ ರು. ಹಣ ಬಿಡುಗಡೆಯಾಗಿದೆ. ಮುಂದಿನ ವಾರದಲ್ಲಿ ಟೆಂಡರ್ ಪ್ರಕ್ರಿಯೆ ಆರಂಭಿಸಿ ಇನ್ನೊಂದು ತಿಂಗಳಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ಸಂವಿಧಾನ ಆಶಯಗಳನ್ನು ಜನರಿಗೆ ತಿಳಿಸುವುದು ಇದರ ಮೂಲ ಉದ್ದೇಶ. ಸಂವಿಧಾನದ ಪುಸ್ತಕ ಮಾದರಿಯಲ್ಲಿ ತಲೆಎತ್ತಲಿರುವ ಭವನ ಭಾರತದಲ್ಲೇ ಮೊದಲ ಸಂವಿಧಾನ ಭವನ ಎಂಬ ಹಿರಿಮೆಗೆ ಪಾತ್ರವಾಗಲಿದೆ.
- ಪಿ.ರವಿಕುಮಾರ್, ಶಾಸಕರು, ಮಂಡ್ಯ ವಿಧಾನಸಭಾ ಕ್ಷೇತ್ರಸಂವಿಧಾನ ಭವನ ಜಿಲ್ಲಾ ವಕೀಲರ ಸಂಘದ ಕನಸಿನ ಕೂಸು. ಅದರ ತ್ರೀ-ಡಿ ಮಾದರಿ ಇದೀಗ ಅಂತಿಮಗೊಂಡಿದೆ. ೭ ಕೋಟಿ ರು. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಲಿರುವ ಭವನಕ್ಕೆ ೩ ಕೋಟಿ ರು. ಹಣ ಬಿಡುಗಡೆಯಾಗಿದೆ. ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು.
- ಟಿ.ಎಸ್.ಸತ್ಯಾನಂದ, ಅಧ್ಯಕ್ಷರು, ಜಿಲ್ಲಾ ವಕೀಲರ ಸಂಘ, ಮಂಡ್ಯ