ಮತ್ತೊಂದು ದೇವಸ್ಥಾನಕ್ಕೂ ಕಳ್ಳರ ಎಂಟ್ರಿ
ದುಷ್ಕರ್ಮಿಗಳು ಏಳೂರಮ್ಮ ದೇವಸ್ಥಾನಕ್ಕೂ ಮುನ್ನ ಅದೇ ಗ್ರಾಮದ ದಂಡಿಮಾರಮ್ಮ ದೇವಸ್ಥಾನಕ್ಕೂ ನುಗ್ಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ದಂಡಿಮಾರಮ್ಮ ದೇವಸ್ಥಾನದಲ್ಲಿ ಯಾವುದೇ ಕಳ್ಳತನವಾಗಿಲ್ಲ ಮತ್ತು ಯಾವುದೇ ಬರಹವನ್ನು ಬರೆದಿಲ್ಲ. ಈ ಘಟನೆಗಳಿಂದಾಗಿ ದ್ವೇಷದ ಉದ್ದೇಶದಿಂದ ಈ ಕೃತ್ಯ ನಡೆದಿದೆಯೇ ಎಂಬ ಅನುಮಾನ ಮೂಡಿದೆ.