ಮೃತಳನ್ನು ಕೆ.ಆರ್.ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದ ನಿವಾಸಿ ಕಾವ್ಯ (26) ಎಂದು ಗುರುತಿಸಲಾಗಿದೆ. ಸುಮಾರು 15 ದಿನಗಳ ಹಿಂದೆ ಹಾಸನ ಜಿಲ್ಲೆಯ ಯುವಕರೊಬ್ಬರೊಂದಿಗೆ ಮದುವೆ ನಿಶ್ಚಯಗೊಂಡಿತ್ತು. ಮದುವೆಗೂ ಮುನ್ನ ತಾನು ಡಿಗ್ರಿ ಮಾಡಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವುದಾಗಿ ಹುಡುಗಿ ಮನೆಯವರಿಗೆ ಹೇಳಿದ್ದನು.
ಇನ್ನು ಎಂಗೇಜ್ಮೆಂಟ್ ಆದ ನಂತರ ಹುಡುಗನ ಪೂರ್ವಾಪರ ವಿಚಾರಿಸಿದಾಗ ಆತ ಯಾವುದೇ ಡಿಗ್ರಿ ಮಾಡದೇ, ತಂದೆಯ ಸೆಕ್ಯೂರಿಟಿ ಕಂಪನಿಯೊಂದನ್ನು ನಡೆಸಿಕೊಂಡು ಹೋಗುತ್ತಿರುವುದು ಬೆಳಕಿಗೆ ಬಂದಿದೆ. ಇದರಿಂದ ಮದುವೆಯನ್ನು ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಯುವತಿಗೆ ಮನೆಯವರು ಸಮಾಧಾನ ಮಾಡಿದ್ದಾರೆ.