ಏಕಕಾಲಕ್ಕೆ 201 ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ: ಸಚಿವ ಶೆಟ್ಟರ್‌

First Published Sep 18, 2020, 2:34 PM IST

ಹುಬ್ಬಳ್ಳಿ(ಸೆ.18): ಪ್ರಧಾನಿ ನರೇಂದ್ರ ಮೋದಿ 70ನೆಯ ಜನ್ಮದಿನದಂಗವಾಗಿ ನವಲಗುಂದ ಕ್ಷೇತ್ರದ 201 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕಾರ್ಯಕ್ಕೆ ಏಕಕಾಲಕ್ಕೆ ಚಾಲನೆ ನೀಡುವ ಮೂಲಕ ವಿಶಿಷ್ಟ ಹಾಗೂ ವಿನೂತನವಾಗಿ ಆಚರಿಸಲಾಯಿತು. ಆರು ತಿಂಗಳೊಳಗೆ ಶಾಲಾ ಕೊಠಡಿಗಳನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಧಾರವಾಡದ ಮುರುಘಾಮಠದ ಮೃತ್ಯುಂಜಯ ಶ್ರೀಗಳು ಕಲಿತಿರುವ ಶಾಲೆಯಲ್ಲೇ ಭೂಮಿಪೂಜೆ ನೆರವೇರಿಸಿದ್ದು ವಿಶೇಷ.

ನಬಾರ್ಡ್‌ ಯೋಜನೆಯಡಿ 25 ಕೋಟಿ ಅನುದಾನದಲ್ಲಿ ನಡೆಯಲಿರುವ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯಕ್ಕೆ ಜಿಲ್ಲಾಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಶೈಕ್ಷಣಿಕ ರಂಗ ಸದೃಢವಾಗಬೇಕು. ಮಕ್ಕಳು ವಿದ್ಯಾವಂತರಾಗಬೇಕು. ಈ ನಿಟ್ಟಿನಲ್ಲಿ ಶಾಲೆಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂಗವಾಗಿ ನವಲಗುಂದ ಕ್ಷೇತ್ರದ 201 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಏಕಕಾಲಕ್ಕೆ ಚಾಲನೆ ನೀಡಲಾಗಿದೆ. ಇದು ಉತ್ತಮ ಬೆಳವಣಿಗೆ ಎಂದರು.
undefined
ನಮ್ಮ ಸರ್ಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗುತ್ತಿವೆ ಎಂದ ಅವರು, ಈ ಯೋಜನೆಯಡಿ ಎಲ್ಲ ಕೊಠಡಿಗಳನ್ನು ಸುಸಜ್ಜಿತ ಹಾಗೂ ಸುರಕ್ಷಿತವಾಗಿ ನಿರ್ಮಾಣ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರ ಬಂದಾಗಿನಿಂದಾಗಿ ಸಾಕಷ್ಟುಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮಲಪ್ರಭಾ ನದಿಯಿಂದ ಜಿಲ್ಲೆಯ ಎಲ್ಲ ಗ್ರಾಮಗಳಿಗೂ ಕುಡಿಯುವ ನೀರು ಪೂರೈಕೆಯ ಯೋಜನೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.
undefined
ಈ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚಿಸಿ ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಇನ್ನು ಪ್ರತಿವರ್ಷ ನವಲಗುಂದ ತಾಲೂಕು ತುಪರಿಹಳ್ಳ- ಬೆಣ್ಣಿಹಳ್ಳದ ಪ್ರವಾಹದಿಂದ ತತ್ತರಿಸುತ್ತಿದೆ. ಇದಕ್ಕೂ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ. ತಾವು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಪರಮಶಿವಯ್ಯ ಸಮಿತಿಯನ್ನು ರಚಿಸಲಾಗಿತ್ತು. ಅದರ ವರದಿ ಆಧರಿಸಿ ಯೋಜನೆ ಸಿದ್ಧಪಡಿಸಲಾಗುತ್ತಿದೆ. ಇದಕ್ಕಾಗಿ ಸದ್ಯ ಸಮೀಕ್ಷೆಯೂ ನಡೆಯುತ್ತಿದೆ. ಈ ಯೋಜನೆಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
undefined
ಅಧ್ಯಕ್ಷತೆ ವಹಿಸಿದ್ದ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಬಡ ರೈತ ಕುಟುಂಬದ ಮಕ್ಕಳಿಗೆ ಶಿಕ್ಷಣ ಸಿಗಬೇಕು. ಮಕ್ಕಳು ಈ ದೇಶದ ಭವಿಷ್ಯ. ಅವರಿಗೆ ಸರಿಯಾದ ರೀತಿ ಶೈಕ್ಷಣಿಕ ಸೌಲಭ್ಯ ಕಲ್ಪಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಸದ್ಯ 201 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಆರು ತಿಂಗಳಲ್ಲಿ 201 ಕೊಠಡಿಗಳ ನಿರ್ಮಾಣ ಪೂರ್ಣಗೊಳಿಸಬೇಕೆಂಬ ಪಣ ತೊಟ್ಟಿದ್ದೇವೆ ಎಂದರು.
undefined
ಇಂಗಳಹಳ್ಳಿ ಶಾಲೆಯಲ್ಲೇ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದು ವಿಶೇಷ. ಏಕೆಂದರೆ ಈ ಶಾಲೆ 125 ವರ್ಷಗಳ ಇತಿಹಾಸ ಹೊಂದಿದೆ. ಮುರುಘಾಮಠದ ಮೃತ್ಯುಂಜಯ ಶ್ರೀಗಳು ಕಲಿತಿರುವ ಶಾಲೆಯಿದು. ಈ ಹಿಂದೆ ಶಾಲೆಗೆ ಬಂದಾಗ ಗ್ರಾಮಸ್ಥರು ಶಾಲಾ ಕಟ್ಟಡ ನಿರ್ಮಿಸುವಂತೆ ಮನವಿ ಮಾಡಿದ್ದರು. ಅದರಂತೆ ಇದೀಗ ಶಾಲಾ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದರು.
undefined
click me!