ಧಾರವಾಡ: ಮನೆ, ಬೆಳೆಹಾನಿ ಕುರಿತು ಶೀಘ್ರ ವರದಿ ಸಲ್ಲಿಸಿ, ಜಗದೀಶ್‌ ಶೆಟ್ಟರ್‌

First Published Aug 14, 2020, 2:18 PM IST

ಧಾರವಾಡ(ಆ.14): ಆ. 5 ಮತ್ತು 6 ರಂದು ಅತಿ ಹೆಚ್ಚಿನ ಮಳೆಯಿಂದಾಗಿ ಜಿಲ್ಲೆಯ ಗ್ರಾಮ ಮತ್ತು ನಗರ ವ್ಯಾಪ್ತಿಯಲ್ಲಿ 250ಕ್ಕೂ ಮನೆಗಳಿಗೆ ಹಾಗೂ 12,857 ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಯಾಗಿದೆ. ಈ ಕುರಿತು ಸಮೀಕ್ಷಾ ವರದಿಯನ್ನು ಅಧಿಕಾರಿಗಳು ಶೀಘ್ರವಾಗಿ ಸಲ್ಲಿಸಬೇಕು ಎಂದು ಬೃಹತ್‌, ಮಧ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್‌ ಶೆಟ್ಟರ್‌ ಸೂಚನೆ ನೀಡಿದ್ದಾರೆ. 

ಮಾತನಾಡಿದ ಅವರು, ಅಪಾರ ಮಳೆಯಿಂದಾಗಿ ವಿವಿಧ ಇಲಾಖೆಗಳಿಗೆ ಸೇರಿರುವ ಕಟ್ಟಡ, ರಸ್ತೆ, ಸೇತುವೆಗಳು ಮತ್ತು ರೈತರ ಬೆಳೆ, ಮನೆಗಳು ಹಾನಿಯಾಗಿವೆ. ಇಲಾಖೆ ಮುಖ್ಯಸ್ಥರು ಹಾನಿ ವಿವರಗಳನ್ನು ಪರಿಶೀಲಿಸಿ ತಕ್ಷಣ ವರದಿ ಸಲ್ಲಿಸಬೇಕು. ಸರ್ಕಾರ ಅತಿವೃಷ್ಟಿಪರಿಹಾರಕ್ಕಾಗಿ ಜಿಲ್ಲಾಡಳಿತಕ್ಕೆ ಈಗಾಗಲೇ 5 ಕೋಟಿ ಬಿಡುಗಡೆ ಮಾಡಿದೆ. ಅಧಿಕಾರಿಗಳು ವಿವರವಾದ ವರದಿ ಸಲ್ಲಿಸಿದ ನಂತರ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿದರು.
undefined
ಕಳೆದ ಸಾಲಿನಲ್ಲಿ ಮನೆ ಹಾನಿಯಾದ ಫಲಾನುಭವಿಗಳಿಗೆ ಮನೆ ಪುನರ್‌ ನಿರ್ಮಾಣಕ್ಕೆ ವರ್ಗೀಕರಣದ ಅನುಗುಣವಾಗಿ ಪರಿಹಾರ ಹಣ ಬಿಡುಗಡೆ ಆಗುತ್ತದೆ. ಕಾಲಮಿತಿಯಲ್ಲಿ ಮನೆ ನಿರ್ಮಾಣ ಮುಗಿಸಿದರೆ ಪೂರ್ಣ ನೆರವು ದೊರೆಯುತ್ತದೆ. ಅಧಿಕಾರಿಗಳು ಹಾನಿಯಾದ ಮನೆಗಳ ಪುನರ್‌ ನಿರ್ಮಾಣ ಹಾಗೂ ದುರಸ್ತಿ ಕಾರ್ಯವನ್ನು ಖುದ್ದು ಪರಿಶೀಲಿಸಿ, ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
undefined
ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಮಾತನಾಡಿ, ಆಗಸ್ಟ್‌ ತಿಂಗಳ ಮಳೆಯಿಂದಾಗಿ ಒಂದು ಜೀವ ಹಾನಿಯಾಗಿದ್ದು, 5 ಲಕ್ಷ ಪರಿಹಾರ ವಿತರಿಸಲಾಗಿದೆ. 4 ಸಣ್ಣ ಹಾಗೂ 9 ದೊಡ್ಡ ಜಾನುವಾರುಗಳ ಹಾನಿಯಾಗಿದ್ದು, ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ. ತುಪ್ಪರಿ ಹಾಗೂ ಬೆಣ್ಣೆ ಹಳ್ಳದ ಪ್ರವಾಹದಿಂದ ಹಾಗೂ ಮಳೆಯಿಂದಾಗಿ ಜಿಲ್ಲೆಯ ಸುಮಾರು 12,857 ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಯಾಗಿದ್ದು, ಕೃಷಿ, ತೋಟಗಾರಿಕೆ, ರೇಷ್ಮೆ, ಸಾಂಖ್ಯಿಕ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಆರಂಭಿಸಲಾಗಿದೆ ಎಂದರು.
undefined
ಜಿಪಂ ಸಿಇಒ ಡಾ. ಬಿ.ಸಿ. ಸತೀಶ್‌ ಮಾತನಾಡಿ, ಮನೆ ಹಾನಿ ಕುರಿತು ವರದಿ ಹಾಗೂ ಮನೆ ಪುನರ್‌ ನಿರ್ಮಾಣ, ದುರಸ್ತಿ ಕುರಿತು ಪರಿಶೀಲಿಸಲು ಪಿಡಿಒಗಳೊಂದಿಗೆ ಪ್ರತಿ ಗ್ರಾಮಕ್ಕೆ ಓರ್ವ ನೋಡಲ್‌ ಅಧಿಕಾರಿ ನೇಮಿಸಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.
undefined
ಲೋಕೋಪಯೋಗಿ, ಸಣ್ಣ ನೀರಾವರಿ, ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆ, ರಾಷ್ಟ್ರೀಯ ಹೆದ್ದಾರಿ, ಕೃಷಿ, ತೋಟಗಾರಿಕೆ, ಹೆಸ್ಕಾಂ, ಮಹಾನಗರ ಪಾಲಿಕೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಅತಿವೃಷ್ಟಿಹಾನಿ ಕುರಿತು ಇಲಾಖಾವಾರು ಅಂದಾಜು ವರದಿಯನ್ನು ಸಭೆಗೆ ನೀಡಿದರು.
undefined
ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ಐ.ಬಿ. ಹಾಗೂ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.
undefined
click me!