ಜನಸಾಮಾನ್ಯರಂತೆ ಕುಂದೂರು ಗ್ರಾಮದ ಗೂಡಂಗಡಿಯಲ್ಲಿ ಟೀ ಕುಡಿದು ಜನರ ಜೊತೆಗೆ ಚರ್ಚಿಸಿದರು. ನಂತರ ದಲಿತರ ಕಾಲೋನಿಗೆ ತೆರಳಿದಾಗ ಮಹಿಳೆಯರು ಆರತಿ ಮಾಡಿ, ಸಚಿವ, ಶಾಸಕರಿಗೆ ಆತ್ಮೀಯ ಸ್ವಾಗತ ಕೋರಿದರು. ಬಳಿಕ ದಲಿತ ಮುಖಂಡ, ಬಗರ್ ಹುಕುಂ ಸಮಿತಿ ಸದಸ್ಯ ಡಿ.ಶಾಂತರಾಜ, ಶಾರದಮ್ಮ ದಂಪತಿ ಮನೆಗೆ ತೆರಳಿ ರಾಗಿ ತಾಲಿಪಟ್ಟು, ತಟ್ಟೆಇಡ್ಲಿ, ತರಕಾರಿ ಉಪ್ಪಿಟ್ಟು, ಜಾಮೂನು, ಕಾಳು ಪಲ್ಯ, ಚಟ್ನಿಪುಡಿ, ತುಪ್ಪ, ಮೊಸರು ಒಳಗೊಂಡ ಬೆಳಗಿನ ಉಪಹಾರ ಮುಗಿಸಿದರು. ಯಾವುದೇ ಹಮ್ಮುಬಿಮ್ಮು ಇಲ್ಲದೆ ಇದೇ ತಾಲಿಪಟ್ಟು, ಕೆಂಪು ಚಟ್ನಿ, ತುಪ್ಪ, ತಿಂಡಿಗಳನ್ನೆಲ್ಲಾ ಕಟ್ಟಿಕೊಡಿ. ಬೆಂಗಳೂರಿಗೆ ಹೋಗುವ ಮಾರ್ಗದಲ್ಲಿ ಇದನ್ನೇ ತಿನ್ನುತ್ತೇನೆಂದು ಹೇಳುವ ಮೂಲಕ ಶಾಂತರಾಜ ದಂಪತಿ, ಕಾಲೋನಿ ಜನರು, ಗ್ರಾಮಸ್ಥರ ಪ್ರಶಂಸೆಗೆ ಪಾತ್ರರಾದರು.