ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಯರಿಗೂ ಸಾಲ ವಿತರಣೆ: ಸಚಿವ ಸೋಮಶೇಖರ್

First Published Jun 12, 2020, 2:33 PM IST

ಚಿತ್ರದುರ್ಗ(ಜೂ.12): ರೈತರಿಗೆ ಪ್ರಸಕ್ತ ಸಾಲಿನಲ್ಲಿ 14 ಸಾವಿರ ಕೋಟಿ ರೂಪಾಯಿ ಸಾಲವನ್ನು ಸಹಕಾರ ಇಲಾಖೆ ವತಿಯಿಂದ ಕೊಡಲಾಗುತ್ತಿದ್ದು, ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೂ ಸಾಲ ವಿತರಣೆ ಮಾಡುವ ಚಿಂತನೆ ಇದೆ. ಶೀಘ್ರದಲ್ಲಿ ಈ ಬಗ್ಗೆ ಕ್ರಮ ವಹಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.
 

ರಾಜ್ಯ ಸರ್ಕಾರದ ಸಹಕಾರ ಇಲಾಖೆ ವತಿಯಿಂದ ಕೋವಿಡ್-19 ವಿರುದ್ಧ ಹೋರಾಡಿದ ಆಶಾ ಕಾರ್ಯಕರ್ತೆಯರಿಗೆ ಕೊಡಮಾಡುವ ತಲಾ 3 ಸಾವಿರ ರೂಪಾಯಿ ಸಹಾಯಧನ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಸ್.ಟಿ.ಸೋಮಶೇಖರ್
undefined
ಬಡವರಬಂಧು ಯೋಜನೆಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ತಲಾ 10 ಸಾವಿರ ರೂ. ಸಾಲ ನೀಡಲಾಗುತ್ತಿದೆ. ಇದೇ ರೀತಿ ಸ್ವಸಹಾಯ ಸಂಘಗಳು, ಸ್ತ್ರೀಶಕ್ತಿ ಸಂಘಗಳಿಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಲಾಗುತ್ತಿದೆ. ಇದೇ ರೀತಿ ಕಡಿಮೆ ಬಡ್ಡಿಗೆ ಆಶಾ ಕಾರ್ಯಕರ್ತೆಯರಿಗೂ ಸಾಲ ನೀಡುವ ಯೋಜನೆಯನ್ನು ಶೀಘ್ರವಾಗಿ ಜಾರಿಗೆ ತರಲಾಗುವುದು ಎಂದು ತಿಳಿಸಿದ ಸಚಿವರು
undefined
ಕೊರೋನಾ ಸಂಕಷ್ಟಗಳ ಕಾಲದಲ್ಲಿ ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ಸಹಕಾರ ಇಲಾಖೆಯ ವತಿಯಿಂದ 52 ಕೋಟಿ ರೂ. ಸಂಗ್ರಹಿಸಿಕೊಟ್ಟಿದ್ದೇನೆ: ಎಸ್.ಟಿ.ಸೋಮಶೇಖರ್
undefined
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ರಾಜ್ಯದಲ್ಲಿರುವ 42 ಸಾವಿರ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ.ಯನ್ನು ತರಲಾಗುತ್ತಿದೆ. ಇದಕ್ಕೆ ಬೇಕಾಗುವ 12.7 ಕೋಟಿ ರೂ.ಯನ್ನು ಸಹಕಾರ ಇಲಾಖೆಯಿಂದಲೇ ಭರಿಸಲಾಗುತ್ತಿದೆ.
undefined
ಲಾಭದಲ್ಲಿರುವ ಸಹಕಾರ ಇಲಾಖೆ ವ್ಯಾಪ್ತಿಯ ಬ್ಯಾಂಕ್‌ಗಳಿಂದ ಹಣವನ್ನು ಸಂಗ್ರಹ ಮಾಡಲಾಗುತ್ತಿದೆ. ಹಣ ಸಂದಾಯ ಆಗದಿದ್ದರೆ ಸಹಕಾರ ಇಲಾಖೆ ಗಮನಕ್ಕೆ ತರಬೇಕು. ಯಾರಿಗೂ ಹಣ ಸಿಗದೇ ಇರಕೂಡದು ಎಂದು ಹೇಳಿದ ಸಚಿವರು
undefined
click me!