ರಾಜ್‌ಕುಮಾರ್‌, ಅಂಬಿ, ವಿಷ್ಣುವರ್ಧನ್ ಹೆಸರಲ್ಲಿ ಪ್ರಾಣಿಗಳನ್ನು ದತ್ತು ಪಡೆದ ಸಚಿವ S T ಸೋಮಶೇಖರ್

First Published Jun 8, 2020, 1:59 PM IST

ಮೈಸೂರು(ಜೂ.08):  ಕನ್ನಡ ಚಿತ್ರರಂಗದ ಮೇರು ನಟರಾದ ವರನಟ ದಿ. ಡಾ.ರಾಜ್ ಕುಮಾರ್, ಮಂಡ್ಯದ ಗಂಡು, ರೆಬೆಲ್ ಸ್ಟಾರ್ ದಿ. ಅಂಬರೀಷ್ ಹಾಗೂ ಸಾಹಸ ಸಿಂಹ ದಿ. ಡಾ. ವಿಷ್ಣುವರ್ಧನ್ ಹೆಸರಿನಲ್ಲಿ ಆನೆಗಳು ಹಾಗೂ ಸಿಂಹವನ್ನು ಒಂದು ವರ್ಷದ ಮಟ್ಟಿಗೆ ದತ್ತು ಪಡೆಯುವ ಮೂಲಕ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ದ್ರುವತಾರೆಯರಿಗೆ ಗೌರವ ಸೂಚಿಸಿದ್ದಾರೆ. 

ಲಾಕ್‌ಡೌನ್‌ನಿಂದ ಸ್ಥಗಿತಗೊಳಿಸಲಾಗಿದ್ದ ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯಕ್ಕೆ ಮೂರು ತಿಂಗಳ ಬಳಿಕ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್
undefined
ಮೈಸೂರು ಮೂಲದ ಡಾ.ರಾಜ್ ಕುಮಾರ್, ಅಂಬರೀಷ್ ಹಾಗೂ ಡಾ. ವಿಷ್ಣುವರ್ಧನ್ ಅವರಿಗೆ ಗೌರವ ಸೂಚಿಸಲು ಇದು ಸಕಾಲ. ಈ ನಿಟ್ಟಿನಲ್ಲಿ ಇವರ ಹೆಸರಿನಲ್ಲಿ ಪ್ರಾಣಿಗಳನ್ನು (ಎರಡು ಆನೆ, ಒಂದು ಸಿಂಹ) ದತ್ತು ಪಡೆಯುತ್ತಿರುವುದಾಗಿ ತಿಳಿಸಿದ ಸಚಿವರು
undefined
ವರನಟ ಡಾ. ರಾಜ್ ಕುಮಾರ್ ಅವರ ಹೆಸರಿನಲ್ಲಿ ಆನೆ ಹಾಗೂ ರೆಬೆಲ್ ಸ್ಟಾರ್ ಅಂಬರೀಷ್ ಅವರ ಹೆಸರಿನಲ್ಲಿ ಆಫ್ರಿಕನ್ ಆನೆ ಮತ್ತು ಸಾಹಸಸಿಂಹ ವಿಷ್ಣುವರ್ಧನ್ ಹೆಸರಿನಲ್ಲಿ ಒಂದು ಸಿಂಹ ದತ್ತು ಪಡೆದ ಸೋಮಶೇಖರ್
undefined
ಸಚಿವರು ಈಗಾಗಲೇ ಕ್ಷೇತ್ರದ ಜನತೆಯಿಂದ, ಆಪ್ತರಿಂದ ಹಾಗೂ ಜನಪ್ರತಿನಿಧಿಗಳಿಂದ ಮೃಗಾಲಯಕ್ಕೆ ಒಟ್ಟು 3.23 ಕೋಟಿ ರೂ. ಹಸ್ತಾಂತರ
undefined
ಮೃಗಾಲಯದ ನಿರ್ವಹಣೆಗೆ ಅಮೆರಿಕದ ಅಕ್ಕ ಸಂಸ್ಥೆಯಿಂದ 40 ಲಕ್ಷ ರೂಪಾಯಿ
undefined
ಸಂಕಷ್ಟದ ಕಾಲದಲ್ಲಿ ಮೃಗಾಲಯಕ್ಕೆ 3.23 ಕೋಟಿ ರೂ. ದೇಣಿಗೆ ಸಂಗ್ರಹಿಸಿಕೊಟ್ಟ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಗೌರವಾರ್ಥವಾಗಿ ಅವರ ಹೆಸರಿನಲ್ಲಿ ಮೃಗಾಲಯದ ಮುಖ್ಯ ಪ್ರವೇಶದ್ವಾರದ ಎದುರು ಫಲಕ ನಿರ್ಮಾಣ
undefined
ಮೃಗಾಲಯದ ಪ್ರವೇಶದ್ವಾರ ಬಳಿಯ ಚಾಮುಂಡೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಷ್
undefined
click me!