ಕಬ್ಬಿನ ಬಿಲ್‌ ಶೇ.1 ರಷ್ಟು ಮಾತ್ರ ಬಾಕಿ: ಸಚಿವ ಶಿವರಾಮ ಹೆಬ್ಬಾರ

First Published Aug 28, 2020, 2:07 PM IST

ಬೆಳಗಾವಿ(ಆ.28): ರಾಜ್ಯದಲ್ಲಿ ಈ ಬಾರಿ 10,900 ಕೋಟಿ ಬೆಲೆಯ ಕಬ್ಬು ಬೆಳೆಯಲಾಗಿದೆ. 10,760 ಕೋಟಿ ರೈತರಿಗೆ ಬಿಲ್‌ ಪಾವತಿಸಲಾಗಿದ್ದು, ಶೇ.1 ರಷ್ಟು ಮಾತ್ರ ಕಬ್ಬಿನ ಹಣ ಪಾವತಿಸುವುದು ಉಳಿದಿದೆ ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಅರಬೈಲ್‌ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ.

ನಗರದಲ್ಲಿರುವ ಎಸ್‌.ನಿಜಲಿಂಗಪ್ಪ ಸಕ್ಕರೆ ಅಧ್ಯಯನ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸುವ ಮೊದಲು ಮಾಧ್ಯಮದವರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ 1 ಕೋಟಿ ಟನ್‌ ಸಕ್ಕರೆ ಸಂಗ್ರಹ ಇದೆ. ಕೇಂದ್ರ ಸರ್ಕಾರ ಸಂಗ್ರಹ ಇರುವ ಸಕ್ಕರೆಯನ್ನು ರಪ್ತು ಮಾಡಲು ಅನುಮತಿ ನೀಡಿಲ್ಲ. ರೈತರು ಮಿತಿಮೀರಿ ರಾಸಾಯನಿಕ ಗೊಬ್ಬರ ಬಳಸುತ್ತಿರುವುದರಿಂದ ಭೂಮಿಯ ಜೀವಸತ್ವ ಹಾಳಾಗುತ್ತಿರುವುದರ ಜತೆಗೆ ರೈತರ ಆರ್ಥಿಕತೆಯ ಮೇಲೂ ಪೆಟ್ಟು ಬೀಳುತ್ತಿದೆ. ಆದ್ದರಿಂದ ರೈತರು ಇಲಾಖೆಯ ಮಾರ್ಗಸೂಚಿಗಳನ್ನು ಅನುಸರಿಸಿ ಕೃಷಿ ಕೈಗೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.
undefined
ರೈತರು ಹೊಸ ಹೊಸ ತಳಿಗಳನ್ನು ಉತ್ಪಾದನೆ ಮಾಡಬೇಕು. ಕಡಿಮೆ ವೆಚ್ಚದಲ್ಲಿ ಕಬ್ಬು ಬೆಳೆಯುವುದನ್ನು ಕಲಿಯಬೇಕು. ಬೆಳೆಯುವ ಕಬ್ಬಿಗೆ ಇಳುವರಿ ಹೆಚ್ಚು ಆಗಬೇಕು. ಬೆಳೆಯುವ ಕಬ್ಬುಗಳಿಂದ ಹೆಚ್ಚು ಸಕ್ಕರೆ ಉತ್ಪಾದನೆ ಮಾಡಬೇಕು ಎಂಬುದು ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ಉದ್ದೇಶ ಆಗಿದೆ. ಉತ್ತರ ಕರ್ನಾಟಕ ಭಾಗದಲ್ಲಿರುವ ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಈ ಭಾಗದ ಹವಾಮಾನಕ್ಕೆ ಸಂಬಂಧಿಸಿದಂತೆ ಹೊಸ ಹೊಸ ತಳಿಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತದೆ. ಸಕ್ಕರೆ ಉತ್ಪಾದನೆಯಲ್ಲಿ ಸಿಂಹಪಾಲು ಬೆಳಗಾವಿ ಜಿಲ್ಲೆ ಹೊಂದಿದೆ. ಹಾಗಾಗಿ ಸಂಶೋಧನೆಗಾಗಿ ಜಾಡಶಹಾಪೂರದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಗಾಗಿ ಸ್ಥಳ ಪರಿಶೀಲನೆ ಮಾಡಿದ್ದೇವೆ. ಕೋವಿಡ್‌-19 ಹಿನ್ನೆಲೆಯಲ್ಲಿ ರಾಜ್ಯದ ಕಬ್ಬು ಬೆಳೆಗಾರರು ಹಾಗೂ ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆ ಆಗಿಲ್ಲ. ಆದರೆ ಇನ್ನುಳಿದ ಬೆಳೆಗಾರರು ತಮ್ಮ ಜೀವನದ ಶಕ್ತಿಯನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು.
undefined
ನಿಜವಾದ ಕಾರ್ಮಿಕರ ಬಗ್ಗೆ ಪರಿಶೀಲನೆ ಮಾಡಿ ಬೇರೆ ರೀತಿಯಲ್ಲಿ ಕಾರ್ಮಿಕ ಕಾರ್ಡ್‌ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು. ಕಾರ್ಮಿಕ ಕಾರ್ಡ್‌ಗಳ ದುರುಪಯೋಗ ಆಗುವುದರಿಂದ ಅರ್ಹ ಕಾರ್ಮಿಕರಿಗೆ ಮೋಸ ಮಾಡಿದಂತೆ ಆಗುತ್ತದೆ. ಇದರಿಂದಾಗಿ ಕಾರ್ಮಿಕರ ಹಿತಾಸಕ್ತಿ ರಕ್ಷಣೆಗೆ ಮಾಡಲು ಆಗುವುದಿಲ್ಲ. ಕಾರ್ಮಿಕರ ಕಾರ್ಡ್‌ ಎಂಬುವುದು ದೊಡ್ಡ ಉದ್ಯೋಗ ಆಗಿದೆ. ಅದಕ್ಕಾಗಿ ನಕಲಿ ಕಾರ್ಮಿಕರ ಕಾರ್ಡ್‌ ಮಾಡುವ ಜಾಲ ತಡೆಯಲು ವ್ಯವಸ್ಥಿತ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ಹೇಳಿದರು.
undefined
ಕಾರ್ಮಿಕರಿಗೆ ಶಕ್ತಿ ಕೊಡುವ ನಿಟ್ಟಿನಲ್ಲಿ ಹಾಗೂ ಕಾರ್ಮಿಕರಿಗೆ ಭದ್ರತೆ ನೀಡುವ ನಿಟ್ಟಿನಲ್ಲಿ ಕೆಲಸ ಆಗಬೇಕು. ಕೋವಿಡ್‌-19 ಹಿನ್ನೆಲೆಯಲ್ಲಿ ಪರಿಹಾರ ಧನದ ರೂಪದಲ್ಲಿ ಕಾರ್ಮಿಕರಿಗೆ 5000 ಘೋಷಣೆ ಮಾಡಿದಾಗ ಹಾವೇರಿ ಜಿಲ್ಲೆ ಒಂದರಲ್ಲಿ 30 ಸಾವಿರ ಕಾರ್ಮಿಕರು ಕಾರ್ಮಿಕ ಕಾರ್ಡ್‌ ಮಾಡಿಸಿಕೊಂಡಿದ್ದಾರೆ. ಅದೇ ರೀತಿ ರಾಜ್ಯ ಅನೇಕ ಕಡೆಗಳಲ್ಲಿ ನಕಲಿ ಕಾರ್ಮಿಕರು ಉದ್ಬವಿಸಲು ಆರಂಭಿಸಿದ್ದಾರೆ ಎಂದು ತಿಳಿಸಿದರು.
undefined
ಕಾರ್ಮಿಕ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಬೇಕು ಎಂದು ಅನೇಕ ಹೊಸ ಹೊಸ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತಿದ್ದು, ಕಾರ್ಮಿಕ ಭಾವನೆಗಳನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಕಾರ್ಡ್‌ ನವೀಕರಿಸದಿದ್ದರೂ ಪರಿಹಾರ ಧನ ನೀಡುತ್ತೇವೆ. ಆದರೆ ಪರಿಹಾರ ಧನ ಘೋಷಣೆ ಮಾಡಿದ ನಂತರದಲ್ಲಿ ಕಾರ್ಮಿಕ ಕಾರ್ಡ್‌ ಮಾಡಿಸಿದವರಿಗೆ ಪರಿಹಾರ ದೊರೆಯುವುದಿಲ್ಲ. ಕಾರ್ಮಿಕರ ಕಾರ್ಡ್‌ ನಿಜವಾದ ಕಾರ್ಮಿಕರಿಗೆ ಸಿಗಬೇಕು ಎಂಬುವುದೆ ಕಾರ್ಮಿಕ ಇಲಾಖೆಯ ಮೂಲಭೂತ ಉದ್ದೇಶವಾಗಿದೆ ಎಂದು ಸಚಿವ ಅರಬೈಲ್‌ ಶಿವರಾಮ ಹೆಬ್ಬಾರ ತಿಳಿಸಿದರು.
undefined
click me!