ಪ್ರವಾಸಿ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆ, ಕಿರಿಕಿರಿ ಉಂಟುಮಾಡಬಾರದು, ಉಪದ್ರವದಲ್ಲಿ ತೊಡಗಬಾರದು ಎಂದು ಪ್ರವಾಸಿಗರಿಗೆ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ. ವಿಕ್ರಮ ಅಮಟೆ ಎಚ್ಚರಿಸಿದ್ದಾರೆ.ಪ್ರವಾಸಿ ಸ್ಥಳಗಳಲ್ಲಿ ಮದ್ಯಪಾನ ಮಾಡಬಾರದು, ಇತರರಿಗೆ ಅನಾನುಕೂಲತೆಯನ್ನುಂಟು ಮಾಡುವ ರೀತಿಯಲ್ಲಿ ವಾಹನಗಳನ್ನು ನಿಲ್ಲಿಸಬಾರದು, ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಸೂಚನೆ ನೀಡಿದ್ದಾರೆ.ಪ್ರವಾಸಿ ತಾಣಗಳಲ್ಲಿ ಮಹಿಳೆಯರು ಅಥವಾ ಹೆಣ್ಣು ಮಕ್ಕಳನ್ನು ಚುಡಾಯಿಸುವುದು ಮಾಡಬಾರದು, ಈವ್ ಟೀಸಿಂಗ್ ನಲ್ಲಿ ತೊಡಗಬಾರದು, ಪ್ಲಾಸ್ಟಿಕ್ ಬಾಟಲ್ ಅಥವಾ ಇತರೆ ಅನುಪಯುಕ್ತ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡಬಾರದು, ಪ್ರಕೃತಿ ಮತ್ತು ಅದರ ಉತ್ತಮ ನಿರ್ವಹಣೆ ಪ್ರತಿಯೊಬ್ಬ ನಾಗರೀಕರ ಜವಾಬ್ದಾರಿ ಎಂದು ಎಚ್ಚರಿಸಿದ್ದಾರೆ.ಶಿಸ್ತು, ಕಾನೂನು ಹಾಗೂ ನೀತಿ ನಿಯಮಗಳನ್ನು ಸದಾ ಅನುಸರಿಸಿ ಹಾಗೂ ಗೌರವಿಸಬೇಕು. ಅರಣ್ಯ ಇಲಾಖೆ, ಜಿಲ್ಲಾಡಳಿತದ ಸೂಚನೆಗಳನ್ನು ತಪ್ಪದೆ ಪಾಲಿಸುವಂತೆ ಸೂಚಿಸಿದ್ದಾರೆ.
ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಬಾರದು, ಪ್ರವಾಸಿ ಸ್ಥಳಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು, ಎಸೆಯಬಾರದು. ತಮ್ಮ ಸುರಕ್ಷತೆ ಮತ್ತು ನಿಮ್ಮ ಪ್ರೀತಿಪಾತ್ರರ ಸುರಕ್ಷತೆಯ ಬಗ್ಗೆ ಸದಾ ಜಾಗರೂಕರಾಗಿರಬೇಕು ಎಂದು ತಿಳಿಸಿದ್ದಾರೆ.
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು